Categories: ಕೋಲಾರ

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನಕ್ಕೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ನಿರ್ಲಕ್ಷ್ಯ ಖಾಸಗಿ ಆಸ್ಪತ್ರೆಗಳ ಬಗ್ಗೆ ವ್ಯಾಮೋಹ ಹೆಚ್ಚಾಗಿದೆ ಅದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಕೊರತೆಯಾಗ ಬಾರದು ಅವಶ್ಯಕತೆ ಇದ್ದರೆ ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಉಚಿತ ಆರೋಗ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಆರೋಗ್ಯ ವಂಚಿತರಾಗಬಾರದು ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಜಗದೀಶ್ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೈನ್ಸ್ ಗಳನ್ನು ದೂರವಿಟ್ಟು ನಾಲ್ಕು ಸರ್ಕಾರಿ ಅಂಬುಲೈನ್ಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಚಿರಶಾಂತಿ ವಾಹನವನ್ನು ಕೊಟ್ಟರೆ ಅನುಕೂಲವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು ಹೊಸ ವಾಹನವನ್ನು ಕೊಡಿಸಲು ಶಾಸಕ ಕೊತ್ತೂರು ಮಂಜುನಾಥ್ ಸಮ್ಮತಿ ಸೂಚಿಸಿದರು ಮೆಡಿಕಲ್ ಕಾಲೇಜಿಗಾಗಿ ಸಾಕಷ್ಟು ಪ್ರಯತ್ನ ಪಟ್ಟು ಜಾರಿ ಮಾಡಿಸಲಾಗಿದೆ ನಮ್ಮ ಗಮನಕ್ಕೆ ಬರದೆ ಸ್ಥಳ ಪರಿಶೀಲಿಸಲು ಅಧಿಕಾರಿಗಳು ಬಂದಿದ್ದಾರೆ ಕಿಡಿಕಾರಿದರು

ತಾಲೂಕಿನಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಲಿದೆ ಯಾವುದೇ ಸಮಸ್ಯೆ ಇದ್ದರೂ ಸರಕಾರ ಪರಿಹಾರ ಒದಗಿಸಲಿದೆ ಶಿಕ್ಷಣ ಆರೋಗ್ಯ ಸರಿಯಾದರೆ ಎಲ್ಲವೂ ಸರಿಹೋಗುತ್ತದೆ ಇವುಗಳ ಕಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಹಶಿಲ್ದಾರ್ ನಯನ, ಜಿಲ್ಲಾ ಆರೋಗ್ಯಧಿಕಾರಿ ಶ್ರೀನಿವಾಸ್, ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

20 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

45 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago