Categories: ಕೋಲಾರ

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನಕ್ಕೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ನಿರ್ಲಕ್ಷ್ಯ ಖಾಸಗಿ ಆಸ್ಪತ್ರೆಗಳ ಬಗ್ಗೆ ವ್ಯಾಮೋಹ ಹೆಚ್ಚಾಗಿದೆ ಅದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಕೊರತೆಯಾಗ ಬಾರದು ಅವಶ್ಯಕತೆ ಇದ್ದರೆ ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಉಚಿತ ಆರೋಗ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಆರೋಗ್ಯ ವಂಚಿತರಾಗಬಾರದು ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಜಗದೀಶ್ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೈನ್ಸ್ ಗಳನ್ನು ದೂರವಿಟ್ಟು ನಾಲ್ಕು ಸರ್ಕಾರಿ ಅಂಬುಲೈನ್ಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಚಿರಶಾಂತಿ ವಾಹನವನ್ನು ಕೊಟ್ಟರೆ ಅನುಕೂಲವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು ಹೊಸ ವಾಹನವನ್ನು ಕೊಡಿಸಲು ಶಾಸಕ ಕೊತ್ತೂರು ಮಂಜುನಾಥ್ ಸಮ್ಮತಿ ಸೂಚಿಸಿದರು ಮೆಡಿಕಲ್ ಕಾಲೇಜಿಗಾಗಿ ಸಾಕಷ್ಟು ಪ್ರಯತ್ನ ಪಟ್ಟು ಜಾರಿ ಮಾಡಿಸಲಾಗಿದೆ ನಮ್ಮ ಗಮನಕ್ಕೆ ಬರದೆ ಸ್ಥಳ ಪರಿಶೀಲಿಸಲು ಅಧಿಕಾರಿಗಳು ಬಂದಿದ್ದಾರೆ ಕಿಡಿಕಾರಿದರು

ತಾಲೂಕಿನಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಲಿದೆ ಯಾವುದೇ ಸಮಸ್ಯೆ ಇದ್ದರೂ ಸರಕಾರ ಪರಿಹಾರ ಒದಗಿಸಲಿದೆ ಶಿಕ್ಷಣ ಆರೋಗ್ಯ ಸರಿಯಾದರೆ ಎಲ್ಲವೂ ಸರಿಹೋಗುತ್ತದೆ ಇವುಗಳ ಕಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಹಶಿಲ್ದಾರ್ ನಯನ, ಜಿಲ್ಲಾ ಆರೋಗ್ಯಧಿಕಾರಿ ಶ್ರೀನಿವಾಸ್, ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

4 minutes ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

14 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

20 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 days ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

2 days ago