ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಢವಳಾರ ಗ್ರಾಮದ ಮೈತ್ರಾ ಸುಂಗಠಾಣ(30) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾರಿನಲ್ಲಿ ಹೆರಿಗೆಂದು ಮೊದಲು ಯಂಕಂಚಿ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ನಂತರ ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ತೆರಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಾಗ ವೈದ್ಯರಿಲ್ಲದೆ ಮೈತ್ರಾ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾಗಲೇ ಬಾಣಂತಿ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಅಧಿಕ ರ*ಕ್ತಸ್ರಾವವಾದಿಂದಾಗಿ, ವೈದ್ಯರಿಲ್ಲದೆ ನರ್ಸ್ ಗಳಿಂದ ಚಿಕಿತ್ಸೆ ನೀಡಿದ್ದಕ್ಕಾಗಿ, ಆಗ ತಾನೇ ಜನಿಸಿದ ಗಂಡು ಮಗು ಸಾ*ವನಪ್ಪಿದೆ.
ತಕ್ಷಣವೇ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಾಣಂತಿಯನ್ನು ಕರೆದುಕೊಂಡು ಹೋಗಲು ಸೂಚನೆ ನೀಡಿದ್ದಾರೆ. ಖಾಸಗಿ ಬಿಎಲ್ ಡಿಇ ಆಸ್ಪತ್ರೆಗೆ ರವಾನಿಸುತ್ತಿರುವಾಗಲೇ ದಾರಿ ಮದ್ಯೆಯೇ ಬಾಣಂತಿ ಸಾ*ವನಪ್ಪಿದ್ದಾರೆ. ಬಾಣಂತಿ ಹಾಗೂ ಹಸುಗೂಸು ಸಾ*ವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಕರ್ತವ್ಯದಲ್ಲಿ ವೈದ್ಯರು ಇದ್ದಿದ್ದರೆ ಎರಡು ಜೀವ ಉಳಿಸಬಹುದಿತ್ತು. ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವುದಿಲ್ಲ ಎಂದು ಆರೋಪ ಮಾಡಿದ್ದಾರೆ..
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…