ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಢವಳಾರ ಗ್ರಾಮದ ಮೈತ್ರಾ ಸುಂಗಠಾಣ(30) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾರಿನಲ್ಲಿ ಹೆರಿಗೆಂದು ಮೊದಲು ಯಂಕಂಚಿ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ನಂತರ ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ತೆರಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಾಗ ವೈದ್ಯರಿಲ್ಲದೆ ಮೈತ್ರಾ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾಗಲೇ ಬಾಣಂತಿ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಅಧಿಕ ರ*ಕ್ತಸ್ರಾವವಾದಿಂದಾಗಿ, ವೈದ್ಯರಿಲ್ಲದೆ ನರ್ಸ್ ಗಳಿಂದ ಚಿಕಿತ್ಸೆ ನೀಡಿದ್ದಕ್ಕಾಗಿ, ಆಗ ತಾನೇ ಜನಿಸಿದ ಗಂಡು ಮಗು ಸಾ*ವನಪ್ಪಿದೆ.
ತಕ್ಷಣವೇ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಾಣಂತಿಯನ್ನು ಕರೆದುಕೊಂಡು ಹೋಗಲು ಸೂಚನೆ ನೀಡಿದ್ದಾರೆ. ಖಾಸಗಿ ಬಿಎಲ್ ಡಿಇ ಆಸ್ಪತ್ರೆಗೆ ರವಾನಿಸುತ್ತಿರುವಾಗಲೇ ದಾರಿ ಮದ್ಯೆಯೇ ಬಾಣಂತಿ ಸಾ*ವನಪ್ಪಿದ್ದಾರೆ. ಬಾಣಂತಿ ಹಾಗೂ ಹಸುಗೂಸು ಸಾ*ವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಕರ್ತವ್ಯದಲ್ಲಿ ವೈದ್ಯರು ಇದ್ದಿದ್ದರೆ ಎರಡು ಜೀವ ಉಳಿಸಬಹುದಿತ್ತು. ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವುದಿಲ್ಲ ಎಂದು ಆರೋಪ ಮಾಡಿದ್ದಾರೆ..
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…