ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂತರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಸೂಚಿಸಿದರು.
ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಇಂದು ಸಂಜೆ ಕೇವಲ ಇಬ್ಬರು ವೈದ್ಯರು ಮಾತ್ರ ನಮಗೆ ಕಾಣಿಸಿಕೊಂಡಿದ್ದಾರೆ. ಮುಖ್ಯವಾಗಿ ಕ್ಯಾಶ್ ಡಿಕ್ಲರೇಷನ್ ಇಲ್ಲ. ಈ ಆಸ್ಪತ್ರೆಗೆ ಬಡವರು ಹೆಚ್ಚಾಗಿ ಬರುತ್ತಾರೆ. ಒಬ್ಬ ರೋಗಿ ಬೆಳಗ್ಗೆಯಿಂದ ಔಷಧ ಇಲ್ಲದೇ ಪರದಾಡುತ್ತಿದ್ದಾನೆ ಎಂದು ದೂರ ಬಂದಿದೆ. ಈಗ ನಾವು ಬಂದು ಔಷಧ ಕೊಡಿಸಿದ್ದೇವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗೆ ಇದೇ ಕೊನೆ ಎಚ್ಚರಿಕೆ, ಮುಂದಿನ ದಿನಗಳಲ್ಲಿ ಇದೇ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅದೇರೀತಿ ತಾಲೂಕು ಕಚೇರಿ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿ ಅಷ್ಟು ಚೆನ್ನಾಗಿಲ್ಲ. ಸರ್ವೇ ಕಚೇರಿಯಲ್ಲಿ ಕೆಲಸ ಮಾಡುವ 26 ಅಧಿಕಾರಿಗಳ ಪೈಕಿ ಕೇವಲ ಇಬ್ಬರು ಮಾತ್ರ ನಮಗೆ ಕಾಣಿಸಿಕೊಂಡರು. ಉಳಿದವರು ಎಲ್ಲಿ ಹೋದರು ಎಂಬುದು ಗೊತ್ತಿಲ್ಲ. ಕಾಣೆಯಾಗಿದ್ದಾರೆ ಎಂದು ನಾವು ದೂರು ನೀಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…