ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂತರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಸೂಚಿಸಿದರು.
ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಇಂದು ಸಂಜೆ ಕೇವಲ ಇಬ್ಬರು ವೈದ್ಯರು ಮಾತ್ರ ನಮಗೆ ಕಾಣಿಸಿಕೊಂಡಿದ್ದಾರೆ. ಮುಖ್ಯವಾಗಿ ಕ್ಯಾಶ್ ಡಿಕ್ಲರೇಷನ್ ಇಲ್ಲ. ಈ ಆಸ್ಪತ್ರೆಗೆ ಬಡವರು ಹೆಚ್ಚಾಗಿ ಬರುತ್ತಾರೆ. ಒಬ್ಬ ರೋಗಿ ಬೆಳಗ್ಗೆಯಿಂದ ಔಷಧ ಇಲ್ಲದೇ ಪರದಾಡುತ್ತಿದ್ದಾನೆ ಎಂದು ದೂರ ಬಂದಿದೆ. ಈಗ ನಾವು ಬಂದು ಔಷಧ ಕೊಡಿಸಿದ್ದೇವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗೆ ಇದೇ ಕೊನೆ ಎಚ್ಚರಿಕೆ, ಮುಂದಿನ ದಿನಗಳಲ್ಲಿ ಇದೇ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅದೇರೀತಿ ತಾಲೂಕು ಕಚೇರಿ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿ ಅಷ್ಟು ಚೆನ್ನಾಗಿಲ್ಲ. ಸರ್ವೇ ಕಚೇರಿಯಲ್ಲಿ ಕೆಲಸ ಮಾಡುವ 26 ಅಧಿಕಾರಿಗಳ ಪೈಕಿ ಕೇವಲ ಇಬ್ಬರು ಮಾತ್ರ ನಮಗೆ ಕಾಣಿಸಿಕೊಂಡರು. ಉಳಿದವರು ಎಲ್ಲಿ ಹೋದರು ಎಂಬುದು ಗೊತ್ತಿಲ್ಲ. ಕಾಣೆಯಾಗಿದ್ದಾರೆ ಎಂದು ನಾವು ದೂರು ನೀಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…