ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂತರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಸೂಚಿಸಿದರು.
ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಇಂದು ಸಂಜೆ ಕೇವಲ ಇಬ್ಬರು ವೈದ್ಯರು ಮಾತ್ರ ನಮಗೆ ಕಾಣಿಸಿಕೊಂಡಿದ್ದಾರೆ. ಮುಖ್ಯವಾಗಿ ಕ್ಯಾಶ್ ಡಿಕ್ಲರೇಷನ್ ಇಲ್ಲ. ಈ ಆಸ್ಪತ್ರೆಗೆ ಬಡವರು ಹೆಚ್ಚಾಗಿ ಬರುತ್ತಾರೆ. ಒಬ್ಬ ರೋಗಿ ಬೆಳಗ್ಗೆಯಿಂದ ಔಷಧ ಇಲ್ಲದೇ ಪರದಾಡುತ್ತಿದ್ದಾನೆ ಎಂದು ದೂರ ಬಂದಿದೆ. ಈಗ ನಾವು ಬಂದು ಔಷಧ ಕೊಡಿಸಿದ್ದೇವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗೆ ಇದೇ ಕೊನೆ ಎಚ್ಚರಿಕೆ, ಮುಂದಿನ ದಿನಗಳಲ್ಲಿ ಇದೇ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅದೇರೀತಿ ತಾಲೂಕು ಕಚೇರಿ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿ ಅಷ್ಟು ಚೆನ್ನಾಗಿಲ್ಲ. ಸರ್ವೇ ಕಚೇರಿಯಲ್ಲಿ ಕೆಲಸ ಮಾಡುವ 26 ಅಧಿಕಾರಿಗಳ ಪೈಕಿ ಕೇವಲ ಇಬ್ಬರು ಮಾತ್ರ ನಮಗೆ ಕಾಣಿಸಿಕೊಂಡರು. ಉಳಿದವರು ಎಲ್ಲಿ ಹೋದರು ಎಂಬುದು ಗೊತ್ತಿಲ್ಲ. ಕಾಣೆಯಾಗಿದ್ದಾರೆ ಎಂದು ನಾವು ದೂರು ನೀಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…