ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ಕ್ಯಾಶ್ ಡಿಕ್ಲರೇಷನ್ ಕಡ್ಡಾಯ- ಸಾರ್ವಜನಿಕ ಆಸ್ಪತ್ರೆ ದನಗಳ ಕೊಟ್ಟಿಗೆ ರೀತಿ ಇದೆ- ತಾಲೂಕು ಕಚೇರಿ, ಎಸಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿ ಅಷ್ಟು ಚೆನ್ನಾಗಿಲ್ಲ- ಅಧಿಕಾರಿಗಳು ಕಾಣೆಯಾಗಿದ್ದಾರೆ ಎಂದು ದೂರು ನೀಡುವ ಅನಿರ್ವಾಯ ಎದುರಾಗಿದೆ-ಉಪಲೋಕಾಯುಕ್ತ ಬಿ.ವೀರಪ್ಪ

ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ‌ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ‌ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂತರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ಸೂಚಿಸಿದರು.

ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಸ್ಥಿತಿಗತಿ ಅತ್ಯಂತ ಘೋರವಾಗಿದೆ. ಶೌಚಾಲಯಗಳಿಗೆ ಬಾಗಿಲುಗಳು, ಸ್ವಚ್ಚತೆ ಇಲ್ಲದೇ ಗೊಬ್ಬೆದ್ದು ನಾರುತ್ತಿವೆ. ಸಾರ್ವಜನಿಕ ಆಸ್ಪತ್ರೆ ದನಗಳ ಕೊಟ್ಟಿಗೆ ರೀತಿ ಇದೆ. ಸರ್ಕಾರದಿಂದ ಸಾಕಷ್ಟು ಅನುದಾನ ಬಂದರು ಅದನ್ನು ಸರಿಯಾಗಿ ವಿನಿಯೋಗಿಸಿ ಮೂಲಭೂತ ಸೌಕರ್ಯ ಒದಗಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಆಸ್ಪತ್ರೆ ಮೇಲ್ವಿಚಾರಕರ ಮನೆ ಇದೆ ರೀತಿಯಾಗಿ ಇರುತ್ತದೆಯೇ ಎಂದು ಪ್ರಶ್ನೆ ಮಾಡಿದರು.

ಇಂದು ಸಂಜೆ ಕೇವಲ ಇಬ್ಬರು ವೈದ್ಯರು ಮಾತ್ರ ನಮಗೆ ಕಾಣಿಸಿಕೊಂಡಿದ್ದಾರೆ. ಮುಖ್ಯವಾಗಿ ಕ್ಯಾಶ್ ಡಿಕ್ಲರೇಷನ್ ಇಲ್ಲ. ಈ ಆಸ್ಪತ್ರೆಗೆ ಬಡವರು ಹೆಚ್ಚಾಗಿ ಬರುತ್ತಾರೆ. ಒಬ್ಬ ರೋಗಿ ಬೆಳಗ್ಗೆಯಿಂದ ಔಷಧ ಇಲ್ಲದೇ ಪರದಾಡುತ್ತಿದ್ದಾನೆ ಎಂದು ದೂರ ಬಂದಿದೆ. ಈಗ ನಾವು ಬಂದು ಔಷಧ ಕೊಡಿಸಿದ್ದೇವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗೆ ಇದೇ ಕೊನೆ ಎಚ್ಚರಿಕೆ, ಮುಂದಿನ ದಿನಗಳಲ್ಲಿ ಇದೇ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅದೇರೀತಿ ತಾಲೂಕು ಕಚೇರಿ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿ ಅಷ್ಟು ಚೆನ್ನಾಗಿಲ್ಲ. ಸರ್ವೇ ಕಚೇರಿಯಲ್ಲಿ ಕೆಲಸ ಮಾಡುವ 26 ಅಧಿಕಾರಿಗಳ ಪೈಕಿ ಕೇವಲ ಇಬ್ಬರು ಮಾತ್ರ ನಮಗೆ ಕಾಣಿಸಿಕೊಂಡರು. ಉಳಿದವರು ಎಲ್ಲಿ ಹೋದರು ಎಂಬುದು ಗೊತ್ತಿಲ್ಲ. ಕಾಣೆಯಾಗಿದ್ದಾರೆ ಎಂದು ನಾವು ದೂರು ನೀಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

ನಗರದಲ್ಲಿ ಸಂಚಾರ ಮಾಡುವ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವಂತೆ ಅರಿವು ಮೂಡಿಸಬೇಕು. ಅರಿವು ಮೂಡಿಸಿದರೂ ಒಂದು ವೇಳೆ ಹೆಲ್ಮೆಟ್ ಧರಿಸದಿದ್ದರೆ ದಂಡ ವಿಧಿಸಬೇಕು ಎಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರಿಗೆ ಸೂಚಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

48 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago