ಸರ್ಕಾರಿ ಕೆಲಸ ಕಾರ್ಯ ಹಾಗೂ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು www.doddaballapura.com ವೆಬ್ ಸೈಟ್ ಜಾರಿ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ  ಕಚೇರಿಗಳಿಗೆ ಅಲೆದಾಡುವ ಕೆಲಸ ತಪ್ಪಿಸುವ ಸಲುವಾಗಿ ಶಾಸಕ ಧೀರಜ್ ಮುನಿರಾಜ್ ಅವರು www.doddaballapura.com ಎಂಬ ವೆಬ್ ಸೈಟ್ ನ್ನು ಜಾರಿಗೆ ತಂದಿದ್ದಾರೆ.

www.doddaballapura.com ಎಂಬ ವೆಬ್ ಸೈಟ್‌ ನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ. ಈ ಮೂಲಕ ಕುಳಿತಲ್ಲೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು, ದೂರು‌ ಸಹ ದಾಖಲು ಮಾಡಬಹುದಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ತಾಲೂಕಿನ ಜನತೆ ಈ ವೈಬ್ ಸೈಟ್‌ನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಎಸ್ ಎಸ್ ಎಲ್ ಸಿ ಅಥವಾ ಪಿ ಯು ಸಿ ಯಲ್ಲಿ ಶೇಕಡಾ 80ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ 1000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಕುರಿತು ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.

ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 80ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯು ಇಂದು ಐದು ವರ್ಷಕ್ಕೆ ಕಾಲಿಟ್ಟಿದೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ಕಟ್ಟಲು ಆಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವು ಅತ್ಯಂತ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ನಗರಸಭೆ ಅಧಕ್ಷೆ‌ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಬಮುಲ್ ನಿರ್ದೇಶಕರಾದ ಬಿ.ಸಿ.ಆನಂದ್, ಮುದ್ದಣ್ಣ, ನಾಗೇಶ್, ಟಿ. ರಂಗರಾಜು, ನಗರಸಭಾ ಸದಸ್ಯ ಬಂತಿ ವೆಂಕಟೇಶ್, ನಾಗರತ್ನಮ್ಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್, ಪುಷ್ಪ ಶಿವಶಂಕರ್, ವಾಣಿ ನಂದಕುಮಾರ್ ಸೇರಿದಂತೆ ಬಿಜೆಪಿ‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

12 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

13 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

16 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

1 day ago