ಸರ್ಕಾರಿ ಕೆಲಸ ಕಾರ್ಯ ಹಾಗೂ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು www.doddaballapura.com ವೆಬ್ ಸೈಟ್ ಜಾರಿ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ  ಕಚೇರಿಗಳಿಗೆ ಅಲೆದಾಡುವ ಕೆಲಸ ತಪ್ಪಿಸುವ ಸಲುವಾಗಿ ಶಾಸಕ ಧೀರಜ್ ಮುನಿರಾಜ್ ಅವರು www.doddaballapura.com ಎಂಬ ವೆಬ್ ಸೈಟ್ ನ್ನು ಜಾರಿಗೆ ತಂದಿದ್ದಾರೆ.

www.doddaballapura.com ಎಂಬ ವೆಬ್ ಸೈಟ್‌ ನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ. ಈ ಮೂಲಕ ಕುಳಿತಲ್ಲೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು, ದೂರು‌ ಸಹ ದಾಖಲು ಮಾಡಬಹುದಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ತಾಲೂಕಿನ ಜನತೆ ಈ ವೈಬ್ ಸೈಟ್‌ನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಎಸ್ ಎಸ್ ಎಲ್ ಸಿ ಅಥವಾ ಪಿ ಯು ಸಿ ಯಲ್ಲಿ ಶೇಕಡಾ 80ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ 1000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಕುರಿತು ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.

ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 80ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯು ಇಂದು ಐದು ವರ್ಷಕ್ಕೆ ಕಾಲಿಟ್ಟಿದೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ಕಟ್ಟಲು ಆಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವು ಅತ್ಯಂತ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ನಗರಸಭೆ ಅಧಕ್ಷೆ‌ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಬಮುಲ್ ನಿರ್ದೇಶಕರಾದ ಬಿ.ಸಿ.ಆನಂದ್, ಮುದ್ದಣ್ಣ, ನಾಗೇಶ್, ಟಿ. ರಂಗರಾಜು, ನಗರಸಭಾ ಸದಸ್ಯ ಬಂತಿ ವೆಂಕಟೇಶ್, ನಾಗರತ್ನಮ್ಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್, ಪುಷ್ಪ ಶಿವಶಂಕರ್, ವಾಣಿ ನಂದಕುಮಾರ್ ಸೇರಿದಂತೆ ಬಿಜೆಪಿ‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

52 minutes ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

13 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

13 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

13 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

13 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

14 hours ago