ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ ಕಚೇರಿಗಳಿಗೆ ಅಲೆದಾಡುವ ಕೆಲಸ ತಪ್ಪಿಸುವ ಸಲುವಾಗಿ ಶಾಸಕ ಧೀರಜ್ ಮುನಿರಾಜ್ ಅವರು www.doddaballapura.com ಎಂಬ ವೆಬ್ ಸೈಟ್ ನ್ನು ಜಾರಿಗೆ ತಂದಿದ್ದಾರೆ.
www.doddaballapura.com ಎಂಬ ವೆಬ್ ಸೈಟ್ ನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ. ಈ ಮೂಲಕ ಕುಳಿತಲ್ಲೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು, ದೂರು ಸಹ ದಾಖಲು ಮಾಡಬಹುದಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.
ತಾಲೂಕಿನ ಜನತೆ ಈ ವೈಬ್ ಸೈಟ್ನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಕುರಿತು ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ನಗರಸಭೆ ಅಧಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಬಮುಲ್ ನಿರ್ದೇಶಕರಾದ ಬಿ.ಸಿ.ಆನಂದ್, ಮುದ್ದಣ್ಣ, ನಾಗೇಶ್, ಟಿ. ರಂಗರಾಜು, ನಗರಸಭಾ ಸದಸ್ಯ ಬಂತಿ ವೆಂಕಟೇಶ್, ನಾಗರತ್ನಮ್ಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್, ಪುಷ್ಪ ಶಿವಶಂಕರ್, ವಾಣಿ ನಂದಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…