ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ ಕಚೇರಿಗಳಿಗೆ ಅಲೆದಾಡುವ ಕೆಲಸ ತಪ್ಪಿಸುವ ಸಲುವಾಗಿ ಶಾಸಕ ಧೀರಜ್ ಮುನಿರಾಜ್ ಅವರು www.doddaballapura.com ಎಂಬ ವೆಬ್ ಸೈಟ್ ನ್ನು ಜಾರಿಗೆ ತಂದಿದ್ದಾರೆ.
www.doddaballapura.com ಎಂಬ ವೆಬ್ ಸೈಟ್ ನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ. ಈ ಮೂಲಕ ಕುಳಿತಲ್ಲೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು, ದೂರು ಸಹ ದಾಖಲು ಮಾಡಬಹುದಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.
ತಾಲೂಕಿನ ಜನತೆ ಈ ವೈಬ್ ಸೈಟ್ನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಕುರಿತು ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ನಗರಸಭೆ ಅಧಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಬಮುಲ್ ನಿರ್ದೇಶಕರಾದ ಬಿ.ಸಿ.ಆನಂದ್, ಮುದ್ದಣ್ಣ, ನಾಗೇಶ್, ಟಿ. ರಂಗರಾಜು, ನಗರಸಭಾ ಸದಸ್ಯ ಬಂತಿ ವೆಂಕಟೇಶ್, ನಾಗರತ್ನಮ್ಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್, ಪುಷ್ಪ ಶಿವಶಂಕರ್, ವಾಣಿ ನಂದಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…