ಸರ್ಕಾರಿ ಕೆಲಸ ಕಾರ್ಯ ಹಾಗೂ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು www.doddaballapura.com ವೆಬ್ ಸೈಟ್ ಜಾರಿ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ  ಕಚೇರಿಗಳಿಗೆ ಅಲೆದಾಡುವ ಕೆಲಸ ತಪ್ಪಿಸುವ ಸಲುವಾಗಿ ಶಾಸಕ ಧೀರಜ್ ಮುನಿರಾಜ್ ಅವರು www.doddaballapura.com ಎಂಬ ವೆಬ್ ಸೈಟ್ ನ್ನು ಜಾರಿಗೆ ತಂದಿದ್ದಾರೆ.

www.doddaballapura.com ಎಂಬ ವೆಬ್ ಸೈಟ್‌ ನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ. ಈ ಮೂಲಕ ಕುಳಿತಲ್ಲೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು, ದೂರು‌ ಸಹ ದಾಖಲು ಮಾಡಬಹುದಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ತಾಲೂಕಿನ ಜನತೆ ಈ ವೈಬ್ ಸೈಟ್‌ನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಎಸ್ ಎಸ್ ಎಲ್ ಸಿ ಅಥವಾ ಪಿ ಯು ಸಿ ಯಲ್ಲಿ ಶೇಕಡಾ 80ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ 1000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಕುರಿತು ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.

ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 80ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯು ಇಂದು ಐದು ವರ್ಷಕ್ಕೆ ಕಾಲಿಟ್ಟಿದೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ಕಟ್ಟಲು ಆಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವು ಅತ್ಯಂತ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ನಗರಸಭೆ ಅಧಕ್ಷೆ‌ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಬಮುಲ್ ನಿರ್ದೇಶಕರಾದ ಬಿ.ಸಿ.ಆನಂದ್, ಮುದ್ದಣ್ಣ, ನಾಗೇಶ್, ಟಿ. ರಂಗರಾಜು, ನಗರಸಭಾ ಸದಸ್ಯ ಬಂತಿ ವೆಂಕಟೇಶ್, ನಾಗರತ್ನಮ್ಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್, ಪುಷ್ಪ ಶಿವಶಂಕರ್, ವಾಣಿ ನಂದಕುಮಾರ್ ಸೇರಿದಂತೆ ಬಿಜೆಪಿ‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

9 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

9 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

15 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago