ಶಿಡ್ಲಘಟ್ಟ : ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ತೋಕಲಘಟ್ಟ ಗ್ರಾಮದ ಅನಿಲ್ ಕುಮಾರ್ ಬಿನ್ ಬೈರೇಗೌಡ ತಾನು ಕೆಪಿಎಸ್ಸಿ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿ ನಿನ್ನ ಮಗನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 21 ಲಕ್ಷದ 36,000 ರೂ ಹಣವನ್ನು ಪಡೆದು ವಂಚಿಸಿರುವುದಾಗಿ ತಿಳಿದು ಬಂದಿದೆ.
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದ ಗೋಪಾಲಕೃಷ್ಣ ಬಿನ್ ನಾರಾಯಣಪ್ಪ ಅವರು ಗ್ರಾಮಾಂತರ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಿಸಿರುತ್ತಾರೆ. ದೂರು ದಾಖಲೆಸಿಕೊಂಡ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ ಸತೀಶ್ ಅವರು ಜಿಲ್ಲಾ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರ ನೇತೃತ್ವದಲ್ಲಿ ತನಿಖೆಯನ್ನು ಕೈಗೊಂಡು ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಅವರ ಮುಂದಾಳತ್ವದಲ್ಲಿ ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಅನಿಲ್ ಕುಮಾರ್ ನನ್ನು ವಿಚಾರಣೆಪಡಿಸಿದಾಗ ಗೋಪಾಲಕೃಷ್ಣ ಅವರ ಬಳಿ ಹಣವನ್ನ ಫೋನ್ ಪೇ ಮೂಲಕ ಹಾಗೂ ವಿವಿಧ ಖಾತೆಗಳಿಗೆ ಹಣ ಹಾಕಿಸಿಕೊಂಡು ಆನ್ಲೈನ್ ಬೆಟ್ಟಿಂಗ್ ನಲ್ಲಿ ಆಡಿ ಸೋತಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ ಸತೀಶ್ ಹಾಗೂ ಸಿಬ್ಬಂದಿ ವರ್ಗದ ಸಂದೀಪ್ ಕುಮಾರ್ ವೆಂಕಟೇಶ್, ಮಂಜುನಾಥ್ ಅವರನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಅಭಿನಂದಿಸಿ ಶ್ಲಾಘಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…