ಶಿಡ್ಲಘಟ್ಟ : ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ತೋಕಲಘಟ್ಟ ಗ್ರಾಮದ ಅನಿಲ್ ಕುಮಾರ್ ಬಿನ್ ಬೈರೇಗೌಡ ತಾನು ಕೆಪಿಎಸ್ಸಿ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿ ನಿನ್ನ ಮಗನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 21 ಲಕ್ಷದ 36,000 ರೂ ಹಣವನ್ನು ಪಡೆದು ವಂಚಿಸಿರುವುದಾಗಿ ತಿಳಿದು ಬಂದಿದೆ.
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದ ಗೋಪಾಲಕೃಷ್ಣ ಬಿನ್ ನಾರಾಯಣಪ್ಪ ಅವರು ಗ್ರಾಮಾಂತರ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಿಸಿರುತ್ತಾರೆ. ದೂರು ದಾಖಲೆಸಿಕೊಂಡ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ ಸತೀಶ್ ಅವರು ಜಿಲ್ಲಾ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರ ನೇತೃತ್ವದಲ್ಲಿ ತನಿಖೆಯನ್ನು ಕೈಗೊಂಡು ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಅವರ ಮುಂದಾಳತ್ವದಲ್ಲಿ ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಅನಿಲ್ ಕುಮಾರ್ ನನ್ನು ವಿಚಾರಣೆಪಡಿಸಿದಾಗ ಗೋಪಾಲಕೃಷ್ಣ ಅವರ ಬಳಿ ಹಣವನ್ನ ಫೋನ್ ಪೇ ಮೂಲಕ ಹಾಗೂ ವಿವಿಧ ಖಾತೆಗಳಿಗೆ ಹಣ ಹಾಕಿಸಿಕೊಂಡು ಆನ್ಲೈನ್ ಬೆಟ್ಟಿಂಗ್ ನಲ್ಲಿ ಆಡಿ ಸೋತಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ ಸತೀಶ್ ಹಾಗೂ ಸಿಬ್ಬಂದಿ ವರ್ಗದ ಸಂದೀಪ್ ಕುಮಾರ್ ವೆಂಕಟೇಶ್, ಮಂಜುನಾಥ್ ಅವರನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಅಭಿನಂದಿಸಿ ಶ್ಲಾಘಿಸಿದ್ದಾರೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…