ಸರ್ಕಾರಿ ಗೋಮಾಳ ಉಳಿಸಿ : ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸಿ – ರಾಮಯ್ಯನಪಾಳ್ಯ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ : ಆಶ್ರಯ ಯೋಜನೆಯಡಿಯಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ಸಲುವಾಗಿ ರಾಮಯ್ಯನ ಪಾಳ್ಯದ ಸರ್ಕಾರಿ ಜಾಗದ ಸರ್ವೇ ಕಾರ್ಯವನ್ನು ಅಧಿಕಾರಿಗಳು ನಡೆಸಿದರು.

ಸ್ಥಳೀಯ ಗ್ರಾಮಸ್ಥರು ಹಾಗೂ ವಕೀಲರಾದ ಚಂದ್ರಶೇಖರ್ ಮಾತನಾಡಿ, ತಾಲ್ಲೂಕಿನ ರಾಮಯ್ಯನ ಪಾಳ್ಯದ (ದಿನ್ನೆ )ಬಳಿ ಸರ್ವೇ ನಂ 22 ರ ಸರ್ಕಾರಿ ಗೋಮಾಳ ಜಾಗ ಕುರಿತಂತೆ ಸರ್ವೇ ಮಾಡಿ ನಮ್ಮ ಗ್ರಾಮದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡ ಸೇರಿದಂತೆ ಹಿಂದುಳಿದ ವರ್ಗದ ಹಲವು ಕುಟುಂಬಗಳು ನಿವೇಶನ ರಹಿತರಾಗಿದ್ದು, ಸ್ಥಳೀಯ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವಂತೆ ಕೋರಿ ಹಲವು ಬಾರಿ ಸರ್ಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ತಾಲೂಕಿನ ದಂಡಾಧಿಕಾರಿಗಳಿಗೆ ಸರ್ಕಾರಿ ಸರ್ವೇ ಮಾಡಿಸುವಂತೆ ಕೋರಿದ್ದು , ಅಂತೆಯೇ ಇಂದು ತಾಲೂಕು ಆಡಳಿತ ವತಿಯಿಂದ ನಮ್ಮ ರಾಮಾಯಣ ಪಾಳ್ಯ ಗ್ರಾಮದ ದಿಣ್ಣೆಯ ಬಳಿ ಸರ್ವೆ ನಡೆಯುತ್ತಿದೆ,

ಸ್ಥಳೀಯವಾಗಿ ಭೂಮಿಯ ಬೇರೆ ಹೆಚ್ಚಾಗಿದ್ದು , ಇದನ್ನು ಅರಿತ ಕೆಲವು ಭೂಗಳ್ಳರು ಸರ್ಕಾರಿ ಗೋಮಾಳ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸುವ ಮೂಲಕ ಮಾರಾಟಕ್ಕೆ ಮುಂದಾಗಿದ್ದಾರೆ ,ಸ್ಥಳೀಯ ಗ್ರಾಮಸ್ಥರಿಗೆ ನಿವೇಶನ ಕಲ್ಪಿಸುವ ಉದ್ದೇಶದಿಂದ ಹಾಗೂ ಭೂಗಳ್ಳರ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಈ ಸರ್ಕಾರಿ ಸರ್ವೆ ನಡೆಯುತ್ತಿದ್ದು , ಅಧಿಕಾರಿಗಳು ತ್ವರಿತಗತಿಯಲ್ಲಿ ಸರ್ಕಾರಿ ಜಾಗದ ಸರ್ವೆ ವರದಿ ಸಲ್ಲಿಸುವ ಮೂಲಕ ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸಬೇಕೆಂದು ಮನವಿ ಮಾಡಿದರು.

ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ರಘು ಕುಮಾರ್ ಮಾತನಾಡಿ ಸ್ಥಳೀಯ ನಿವಾಸಿಗಳಿಗೆ ನಿವೇಶನ ಕಲ್ಪಿಸುವಂತೆ ಕೋರಿ ಹಲವು ಬಾರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಇತ್ತೀಚಿನ ದಿನಗಳಲ್ಲಿ ಸ್ಥಳೀಯವಾಗಿ ಭೂಮಿ(ಜಮೀನು ) ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು ಇದನ್ನು ಅರಿತ ಕೆಲವರು ಸರ್ಕಾರಿ ಗೋಮಾಳ ಜಾಗಕ್ಕೆ ನಕಲಿ ದಾಖಲಾತಿ ಸೃಷ್ಟಿಸಿಕೊಂಡು ಮಾರಾಟ ಮಾಡಲು ಮುಂದಾಗಿದ್ದಾರೆ , ಸರ್ಕಾರಿ ಜಾಗವನ್ನು ಆಶ್ರಯ ಯೋಜನೆ ಅಡಿ ಸ್ಥಳೀಯ ಕುಟುಂಬಗಳಿಗೆ ಹಂಚಿಕೆ ಮಾಡುವ ನಿಟ್ಟಿನಲ್ಲಿ ಈ ಸರ್ವೇ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ವಕೀಲ ಚಂದ್ರಶೇಖರ್, ಸದಸ್ಯರು ರಘುಕುಮಾರ್, ಮಣಿ ಜಿ ಗೋವಿಂದರಾಜು, ನಾರಾಯಣಪ್ಪ, ನಾಗೇಶ್, ನಾಗರಾಜು, ಮುರುಗೇಶ್, ಗಂಗಾಧರ್ ಗ್ರಾಮಲೆಕ್ಕಾಧಿಕಾರಿ ಗುರುಪ್ರಸಾದ್, ಸರ್ವೇಯರ್ ಪ್ರಕಾಶ್ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago