ಸರ್ಕಾರಿ ಗೋಮಾಳ ಉಳಿಸಿ : ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸಿ – ರಾಮಯ್ಯನಪಾಳ್ಯ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ : ಆಶ್ರಯ ಯೋಜನೆಯಡಿಯಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ಸಲುವಾಗಿ ರಾಮಯ್ಯನ ಪಾಳ್ಯದ ಸರ್ಕಾರಿ ಜಾಗದ ಸರ್ವೇ ಕಾರ್ಯವನ್ನು ಅಧಿಕಾರಿಗಳು ನಡೆಸಿದರು.

ಸ್ಥಳೀಯ ಗ್ರಾಮಸ್ಥರು ಹಾಗೂ ವಕೀಲರಾದ ಚಂದ್ರಶೇಖರ್ ಮಾತನಾಡಿ, ತಾಲ್ಲೂಕಿನ ರಾಮಯ್ಯನ ಪಾಳ್ಯದ (ದಿನ್ನೆ )ಬಳಿ ಸರ್ವೇ ನಂ 22 ರ ಸರ್ಕಾರಿ ಗೋಮಾಳ ಜಾಗ ಕುರಿತಂತೆ ಸರ್ವೇ ಮಾಡಿ ನಮ್ಮ ಗ್ರಾಮದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡ ಸೇರಿದಂತೆ ಹಿಂದುಳಿದ ವರ್ಗದ ಹಲವು ಕುಟುಂಬಗಳು ನಿವೇಶನ ರಹಿತರಾಗಿದ್ದು, ಸ್ಥಳೀಯ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವಂತೆ ಕೋರಿ ಹಲವು ಬಾರಿ ಸರ್ಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ತಾಲೂಕಿನ ದಂಡಾಧಿಕಾರಿಗಳಿಗೆ ಸರ್ಕಾರಿ ಸರ್ವೇ ಮಾಡಿಸುವಂತೆ ಕೋರಿದ್ದು , ಅಂತೆಯೇ ಇಂದು ತಾಲೂಕು ಆಡಳಿತ ವತಿಯಿಂದ ನಮ್ಮ ರಾಮಾಯಣ ಪಾಳ್ಯ ಗ್ರಾಮದ ದಿಣ್ಣೆಯ ಬಳಿ ಸರ್ವೆ ನಡೆಯುತ್ತಿದೆ,

ಸ್ಥಳೀಯವಾಗಿ ಭೂಮಿಯ ಬೇರೆ ಹೆಚ್ಚಾಗಿದ್ದು , ಇದನ್ನು ಅರಿತ ಕೆಲವು ಭೂಗಳ್ಳರು ಸರ್ಕಾರಿ ಗೋಮಾಳ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸುವ ಮೂಲಕ ಮಾರಾಟಕ್ಕೆ ಮುಂದಾಗಿದ್ದಾರೆ ,ಸ್ಥಳೀಯ ಗ್ರಾಮಸ್ಥರಿಗೆ ನಿವೇಶನ ಕಲ್ಪಿಸುವ ಉದ್ದೇಶದಿಂದ ಹಾಗೂ ಭೂಗಳ್ಳರ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಈ ಸರ್ಕಾರಿ ಸರ್ವೆ ನಡೆಯುತ್ತಿದ್ದು , ಅಧಿಕಾರಿಗಳು ತ್ವರಿತಗತಿಯಲ್ಲಿ ಸರ್ಕಾರಿ ಜಾಗದ ಸರ್ವೆ ವರದಿ ಸಲ್ಲಿಸುವ ಮೂಲಕ ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸಬೇಕೆಂದು ಮನವಿ ಮಾಡಿದರು.

ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ರಘು ಕುಮಾರ್ ಮಾತನಾಡಿ ಸ್ಥಳೀಯ ನಿವಾಸಿಗಳಿಗೆ ನಿವೇಶನ ಕಲ್ಪಿಸುವಂತೆ ಕೋರಿ ಹಲವು ಬಾರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಇತ್ತೀಚಿನ ದಿನಗಳಲ್ಲಿ ಸ್ಥಳೀಯವಾಗಿ ಭೂಮಿ(ಜಮೀನು ) ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು ಇದನ್ನು ಅರಿತ ಕೆಲವರು ಸರ್ಕಾರಿ ಗೋಮಾಳ ಜಾಗಕ್ಕೆ ನಕಲಿ ದಾಖಲಾತಿ ಸೃಷ್ಟಿಸಿಕೊಂಡು ಮಾರಾಟ ಮಾಡಲು ಮುಂದಾಗಿದ್ದಾರೆ , ಸರ್ಕಾರಿ ಜಾಗವನ್ನು ಆಶ್ರಯ ಯೋಜನೆ ಅಡಿ ಸ್ಥಳೀಯ ಕುಟುಂಬಗಳಿಗೆ ಹಂಚಿಕೆ ಮಾಡುವ ನಿಟ್ಟಿನಲ್ಲಿ ಈ ಸರ್ವೇ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ವಕೀಲ ಚಂದ್ರಶೇಖರ್, ಸದಸ್ಯರು ರಘುಕುಮಾರ್, ಮಣಿ ಜಿ ಗೋವಿಂದರಾಜು, ನಾರಾಯಣಪ್ಪ, ನಾಗೇಶ್, ನಾಗರಾಜು, ಮುರುಗೇಶ್, ಗಂಗಾಧರ್ ಗ್ರಾಮಲೆಕ್ಕಾಧಿಕಾರಿ ಗುರುಪ್ರಸಾದ್, ಸರ್ವೇಯರ್ ಪ್ರಕಾಶ್ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

5 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

5 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

24 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

24 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago