ಸರ್ಕಾರಿ ಗೋಮಾಳ ಉಳಿಸಿ : ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸಿ – ರಾಮಯ್ಯನಪಾಳ್ಯ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ : ಆಶ್ರಯ ಯೋಜನೆಯಡಿಯಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ಸಲುವಾಗಿ ರಾಮಯ್ಯನ ಪಾಳ್ಯದ ಸರ್ಕಾರಿ ಜಾಗದ ಸರ್ವೇ ಕಾರ್ಯವನ್ನು ಅಧಿಕಾರಿಗಳು ನಡೆಸಿದರು.

ಸ್ಥಳೀಯ ಗ್ರಾಮಸ್ಥರು ಹಾಗೂ ವಕೀಲರಾದ ಚಂದ್ರಶೇಖರ್ ಮಾತನಾಡಿ, ತಾಲ್ಲೂಕಿನ ರಾಮಯ್ಯನ ಪಾಳ್ಯದ (ದಿನ್ನೆ )ಬಳಿ ಸರ್ವೇ ನಂ 22 ರ ಸರ್ಕಾರಿ ಗೋಮಾಳ ಜಾಗ ಕುರಿತಂತೆ ಸರ್ವೇ ಮಾಡಿ ನಮ್ಮ ಗ್ರಾಮದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡ ಸೇರಿದಂತೆ ಹಿಂದುಳಿದ ವರ್ಗದ ಹಲವು ಕುಟುಂಬಗಳು ನಿವೇಶನ ರಹಿತರಾಗಿದ್ದು, ಸ್ಥಳೀಯ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವಂತೆ ಕೋರಿ ಹಲವು ಬಾರಿ ಸರ್ಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ತಾಲೂಕಿನ ದಂಡಾಧಿಕಾರಿಗಳಿಗೆ ಸರ್ಕಾರಿ ಸರ್ವೇ ಮಾಡಿಸುವಂತೆ ಕೋರಿದ್ದು , ಅಂತೆಯೇ ಇಂದು ತಾಲೂಕು ಆಡಳಿತ ವತಿಯಿಂದ ನಮ್ಮ ರಾಮಾಯಣ ಪಾಳ್ಯ ಗ್ರಾಮದ ದಿಣ್ಣೆಯ ಬಳಿ ಸರ್ವೆ ನಡೆಯುತ್ತಿದೆ,

ಸ್ಥಳೀಯವಾಗಿ ಭೂಮಿಯ ಬೇರೆ ಹೆಚ್ಚಾಗಿದ್ದು , ಇದನ್ನು ಅರಿತ ಕೆಲವು ಭೂಗಳ್ಳರು ಸರ್ಕಾರಿ ಗೋಮಾಳ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸುವ ಮೂಲಕ ಮಾರಾಟಕ್ಕೆ ಮುಂದಾಗಿದ್ದಾರೆ ,ಸ್ಥಳೀಯ ಗ್ರಾಮಸ್ಥರಿಗೆ ನಿವೇಶನ ಕಲ್ಪಿಸುವ ಉದ್ದೇಶದಿಂದ ಹಾಗೂ ಭೂಗಳ್ಳರ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಈ ಸರ್ಕಾರಿ ಸರ್ವೆ ನಡೆಯುತ್ತಿದ್ದು , ಅಧಿಕಾರಿಗಳು ತ್ವರಿತಗತಿಯಲ್ಲಿ ಸರ್ಕಾರಿ ಜಾಗದ ಸರ್ವೆ ವರದಿ ಸಲ್ಲಿಸುವ ಮೂಲಕ ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸಬೇಕೆಂದು ಮನವಿ ಮಾಡಿದರು.

ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ರಘು ಕುಮಾರ್ ಮಾತನಾಡಿ ಸ್ಥಳೀಯ ನಿವಾಸಿಗಳಿಗೆ ನಿವೇಶನ ಕಲ್ಪಿಸುವಂತೆ ಕೋರಿ ಹಲವು ಬಾರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಇತ್ತೀಚಿನ ದಿನಗಳಲ್ಲಿ ಸ್ಥಳೀಯವಾಗಿ ಭೂಮಿ(ಜಮೀನು ) ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು ಇದನ್ನು ಅರಿತ ಕೆಲವರು ಸರ್ಕಾರಿ ಗೋಮಾಳ ಜಾಗಕ್ಕೆ ನಕಲಿ ದಾಖಲಾತಿ ಸೃಷ್ಟಿಸಿಕೊಂಡು ಮಾರಾಟ ಮಾಡಲು ಮುಂದಾಗಿದ್ದಾರೆ , ಸರ್ಕಾರಿ ಜಾಗವನ್ನು ಆಶ್ರಯ ಯೋಜನೆ ಅಡಿ ಸ್ಥಳೀಯ ಕುಟುಂಬಗಳಿಗೆ ಹಂಚಿಕೆ ಮಾಡುವ ನಿಟ್ಟಿನಲ್ಲಿ ಈ ಸರ್ವೇ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ವಕೀಲ ಚಂದ್ರಶೇಖರ್, ಸದಸ್ಯರು ರಘುಕುಮಾರ್, ಮಣಿ ಜಿ ಗೋವಿಂದರಾಜು, ನಾರಾಯಣಪ್ಪ, ನಾಗೇಶ್, ನಾಗರಾಜು, ಮುರುಗೇಶ್, ಗಂಗಾಧರ್ ಗ್ರಾಮಲೆಕ್ಕಾಧಿಕಾರಿ ಗುರುಪ್ರಸಾದ್, ಸರ್ವೇಯರ್ ಪ್ರಕಾಶ್ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

14 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago