ದೊಡ್ಡಬಳ್ಳಾಪುರ: ತಾಲೂಕಿನ ಬೋಕಿಪುರದಲ್ಲಿ ಆಂಧ್ರ ಮೂಲದವರು ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮದ ರೈತರೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಇಕೋ ಫಾರ್ಮ್ ಹೌಸ್ ಎಂಬ ಸಂಸ್ಥೆಯಿಂದ ಜಮೀನು ಖರೀದಿ ಮಾಡಲಾಗಿತ್ತು. ಸರ್ವೆ ನಂಬರ್ 22 ರಲ್ಲಿ 1 ಎಕ್ಕರೆಗೂ ಹೆಚ್ಚು ಗೋಮಾಳಕ್ಕೆ ಕಾಂಪೌಂಡ್ ಹಾಕಿಕೊಳ್ಳಲು ಯತ್ನ ಮಾಡುತ್ತಿದ್ದಾರೆ. ಇದಕ್ಕೆ ಊರಿನ ಗ್ರಾಮಸ್ಥರು ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ವಿರೋಧ ವ್ಯಕ್ತಪಡಸಿದ್ದಾರೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲ್ಮಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಒತ್ತುವರಿ ಆಗಿರುವ ಅನುಮಾನ ಇರುವುದರಿಂದ ಸರ್ವೇ ಮಾಡಿಸಲು ಸೂಚನೆ ನೀಡಲಾಗಿದೆ.
ಸರ್ವೇ ಮಾಡಿಸುವವರೆಗೂ ಕಾಂಪೌಂಡ್ ನಿರ್ಮಾಣ ಮಾಡದಂತೆ ಕಂದಾಯ ಇಲಾಖೆ ಅಧಿಕಾರಿಗಳು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಕಾಂಪೌಂಡ್ ನಿರ್ಮಾಣಕ್ಕೆ ದೊಡ್ಡಬೆಳವಂಗಲ ಪೊಲೀಸರಿಂದ ತಡೆ ನೀಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…