Categories: ಕೋಲಾರ

ಸರ್ಕಾರಿ ಜಮೀನು ಉಳಿಸಲು ಅಧಿಕಾರಿಗಳಿಗೆ ಸೂಚನೆ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮುಂದಿನ ದಿನಗಳಲ್ಲಿ ವೇಮಗಲ್ ಅನ್ನು ಹೊಸ ತಾಲ್ಲೂಕು ಆಗುವ ಸಾದ್ಯತೆ ಹೆಚ್ಚಾಗಿರುವುದರಿಂದ ಅ ಭಾಗದಲ್ಲಿರುವ ಗುಂಡು ತೋಪು, ಕೆರೆ, ಕುಂಟೆ, ಹಾಗೂ ಸರ್ಕಾರಿ ಜಮೀನುಗಳನ್ನು ಉಳಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಉಪವಿಭಾಗಾಧಿಕಾರಿ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಮಂಜೂರಾಗಿ ಖಾತೆಗಳಾಗಿರುವ ಜಮೀನುಗಳ ಪೋಡಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಈಗಾಗಲೇ ಪೋಡಿ ಆಂದೋಲನ ಕಾರ್ಯ ಬಿರುಸಿನಿಂದ ಸಾಗಿದೆ ಕನಿಷ್ಠ ಎರಡು ತಿಂಗಳೊಳಗೆ ರೈತರಿಗೆ ದಾಖಲೆಗಳನ್ನು ಕೊಡಿಸುವ ಕೆಲಸ ಮಾಡಲಾಗುತ್ತದೆ ಎಂದರು.

ವೇಮಗಲ್ ಅನ್ನು ಹೊಸ ತಾಲ್ಲೂಕು ಕೇಂದ್ರ ಮಾಡಿದರೆ ಅ ಭಾಗದಲ್ಲಿ ಹೊಸದಾಗಿ ತಾಲೂಕು ಮಟ್ಟದ ಅಧಿಕಾರಿಗಳ ಕಛೇರಿ ಶಾಲೆ, ಕಾಲೇಜು ಆಸ್ಪತ್ರೆಗಾಗಿ ಜಮೀನುಗಳನ್ನು ಉಳಿಸಬೇಕಾಗಿದೆ ಅದಕ್ಕಾಗಿ ಗುಂಡು ತೋಪು ಕೆರೆ, ಕುಂಟೆ ಸ್ಮಶಾನ ಜಮೀನುಗಳನ್ನು ಯಾರು ಅಕ್ರಮವಾಗಿ ಭೋಗಸ್ ದಾಖಲೆಗಳನ್ನು ಸೃಷ್ಟಿಸಿಕೊಳ್ಳಲು ಸಾಧ್ಯವಿಲ್ಲ ಅದನೆಲ್ಲಾ ಸರ್ವೆ ಮಾಡಿ ಪೆನ್ಸಿಂಗ್ ಹಾಕಿಸುತ್ತೇವೆ ಬೋಗಸ್ ದಾಖಲೆಗಳನ್ನು ಸೃಷ್ಟಿಸಿಕೊಂಡು ಅತಿಕ್ರಮಿಸಿಕೊಂಡರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿರುವ ರೈತರಿಗೆ ಸಾಗುವಳಿ ಚೀಟಿ ನೀಡಿ ಖಾತೆ ಮಾಡಲಾಗಿರುವ ಜಮೀನುಗಳಿಗೆ ಹದ್ದುಬಸ್ತು ಗುರುತಿಸುವ ಕಾರ್ಯ ನಡೆಯುತ್ತಿದೆ ರಾಜ್ಯದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಪೋಡಿ ಆಂದೋಲನದಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳಲಿದೆ. ಪಿ ನಂಬರ್ ಇರುವ ಜಮೀನುಗಳಿಗೆ ಪ್ರತ್ಯೇಕ ಪಾಣಿ ನೀಡುವ ಉದ್ದೇಶ ಈ ಆಂದೋಲನ ಪ್ರಮುಖ ಉದ್ದೇಶವಾಗಿದೆ ಎಂದರು

ಕೋಲಾರ ವಿದಾನಸಭಾ ಕ್ಷೇತ್ರದಲ್ಲಿ ೨೦೧೬-೨೦೧೭ ನೇ ಸಾಲಿನಲ್ಲಿ ನೀಡಲಾಗಿರುವ ಸಾಗುವಳಿ ಚೀಟಿಗಳಲ್ಲಿ ಅವ್ಯವಹಾರವಾಗಿದೆ ಎನ್ನುವ ಆರೋಪದಿಂದ ಎಸ್.ಐ.ಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ಸಾಗುವಳಿ ನೀಡಲಾಗಿರುವ ಹಲವು ರೈತರ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಆದರೆ ಅದರಲ್ಲಿ ಯಾವುದು ಅಕ್ರಮವಾಗಿದೆ ಅದು ಬಿಟ್ಟು ಉಳಿದ ಕಡತಗಳನ್ನು ವಾಪಸ್ ನೀಡುವಂತೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಪತ್ರ ಮುಖೇನ ಎಸ್.ಐ.ಟಿ ಅಧಿಕಾರಿಗಳನ್ನು ಕೋರಲಾಗಿದೆ ಶೀಘ್ರದಲ್ಲೇ ಎಲ್ಲಾ ರೈತರಿಗೂ ಪಹಣಿ ನೀಡುವ ಕೆಲಸ ಕೋಲಾರದಲ್ಲಿ ನಡೆಯಲಿದೆ ಎಂದರು.

ಆಶ್ರಯ ಯೋಜನೆಯಲ್ಲಿ ಶೀಘ್ರದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರದ ನಿವೇಶನ ರಹಿತರನ್ನು ಗುರುತಿಸಿ ನಿವೇಶನ ನೀಡುವ ಪ್ರಯತ್ನ ನಡೆಯುತ್ತಿದೆ ತಾಲ್ಲೂಕಿನ ಅರಹಳ್ಳಿ ಬಳಿ ಈಗಾಗಲೇ ಜಮೀನನ್ನು ಗುರುತಿಸಲಾಗಿದೆ. ಅದಕ್ಕೂ ಮೊದಲು ಆಶ್ರಯ ಸಮಿತಿಯ ರಚನೆಯಾಗಬೇಕಿತ್ತು ಸಮಿತಿ ರಚನೆಯಾಗಿದೆ ಶೀಘ್ರದಲ್ಲೇ ಆಶ್ರಯ ಸಮಿತಿ ಸಭೆ ನಡೆಸಿ ತೀರ್ಮಾಣ ಕೈಗೊಳ್ಳಲಾಗುವುದು ಸರ್ಕಾರದಿಂದ ಕೊಂಡು ನಿವೇಶನ ರಹಿತರಿಗೆ ನೀಡುವಂತೆ ಆದೇಶವನ್ನು ಹೊರಡಿಸಲಾಗಿದೆ. ವಿಶೇಷವಾಗಿ ಆಪಾರ್ಟ್ಮೆಂಟ್ ರೀತಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡುವ ಆಲೋಚನೆ ಇದೆ. ಅದರಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಲಭ್ಯಗಳನ್ನು ಒಳಗೊಂಡು ಮಾಡಬೇಕು ಎನ್ನುವುದು ಆಲೋಚನೆ ಇದೆ ಎಂದು ಹೇಳಿದರು.

ಕುಡಾದಲ್ಲಿ ಹಣದ ಕೊರತೆ ಇದೆ ಹಾಗಾಗಿ ಕೂಡಾ ಬಡಾವಣೆಯಲ್ಲಿ ೨೭೦ ಕ್ಕೂ ಹೆಚ್ಚು ಖಾಲಿ ನಿವೇಶಗಳಿಗೆ ಅದನ್ನೆಲ್ಲಾ ಹರಾಜು ಮಾಡಿ ಮಾರಾಟ ಮಾಡಿ ಅದರಿಂದ ಬರುವ ಹಣದಿಂದ ಜಮೀನು ಖರೀದಿ ಮಾಡಿ ಹೊಸ ಬಡಾವಣೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಸರ್ಕಾರದಿಂದ ಅನುಮತಿ ನೀಡಲು ಪತ್ರ ಬರೆಯಲಾಗಿದೆ. ಅನುಮತಿ ಸಿಕ್ಕ ಕೂಡಲೇ ಕೂಡ ಬಡಾವಣೆ ನಿರ್ಮಾಣ ಮಾಡಲಾಗುವುದು ಎಂದರು.

ಕುಡಾ ಬಡಾವಣೆಯಲ್ಲಿ ಹರಾಜು ಪ್ರಕ್ರಿಯೆ ಮೂಲಕ ಮಾರಾಟವಾಗದೇ ಇದ್ದಲ್ಲಿ ಸಿಂಗಲ್ ಏಜೆಂಟರಿಗೆ ಬಡಾವಣೆಯಲ್ಲಿರುವ ನಿವೇಶನಗಳನ್ನು ಮಾರಾಟ ಮಾಡಲಾಗುವುದು ಈ ಹಿಂದೆ ಹರಾಜು ಪ್ರಕ್ರಿಯೆ ನಡೆದಿತ್ತಾದರೂ ಅಭಿವೃದ್ದಿ ಇಲ್ಲದೆ ಇದ್ದುದ್ದರಿಂದ ಖರೀದಿಗೆ ಯಾರು ಮುಂದಾಗಿರಲ್ಲಿ, ಆದರೆ ಈ ಬಾರಿ ಆರೀತಿ ಆಗುವುದಿಲ್ಲ ಎನ್ನುವ ನಂಬಿಕೆ ಇದೆ. ಕೂಡಾ ಬಡಾವಣೆಯನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ನಿವೇಶನ ಕೊಂಡುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ ಎನ್ನುವ ನಿರೀಕ್ಷೆ ಇದೆ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

17 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago