ಕೋಲಾರ: ಮುಂದಿನ ದಿನಗಳಲ್ಲಿ ವೇಮಗಲ್ ಅನ್ನು ಹೊಸ ತಾಲ್ಲೂಕು ಆಗುವ ಸಾದ್ಯತೆ ಹೆಚ್ಚಾಗಿರುವುದರಿಂದ ಅ ಭಾಗದಲ್ಲಿರುವ ಗುಂಡು ತೋಪು, ಕೆರೆ, ಕುಂಟೆ, ಹಾಗೂ ಸರ್ಕಾರಿ ಜಮೀನುಗಳನ್ನು ಉಳಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಉಪವಿಭಾಗಾಧಿಕಾರಿ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಮಂಜೂರಾಗಿ ಖಾತೆಗಳಾಗಿರುವ ಜಮೀನುಗಳ ಪೋಡಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಈಗಾಗಲೇ ಪೋಡಿ ಆಂದೋಲನ ಕಾರ್ಯ ಬಿರುಸಿನಿಂದ ಸಾಗಿದೆ ಕನಿಷ್ಠ ಎರಡು ತಿಂಗಳೊಳಗೆ ರೈತರಿಗೆ ದಾಖಲೆಗಳನ್ನು ಕೊಡಿಸುವ ಕೆಲಸ ಮಾಡಲಾಗುತ್ತದೆ ಎಂದರು.
ವೇಮಗಲ್ ಅನ್ನು ಹೊಸ ತಾಲ್ಲೂಕು ಕೇಂದ್ರ ಮಾಡಿದರೆ ಅ ಭಾಗದಲ್ಲಿ ಹೊಸದಾಗಿ ತಾಲೂಕು ಮಟ್ಟದ ಅಧಿಕಾರಿಗಳ ಕಛೇರಿ ಶಾಲೆ, ಕಾಲೇಜು ಆಸ್ಪತ್ರೆಗಾಗಿ ಜಮೀನುಗಳನ್ನು ಉಳಿಸಬೇಕಾಗಿದೆ ಅದಕ್ಕಾಗಿ ಗುಂಡು ತೋಪು ಕೆರೆ, ಕುಂಟೆ ಸ್ಮಶಾನ ಜಮೀನುಗಳನ್ನು ಯಾರು ಅಕ್ರಮವಾಗಿ ಭೋಗಸ್ ದಾಖಲೆಗಳನ್ನು ಸೃಷ್ಟಿಸಿಕೊಳ್ಳಲು ಸಾಧ್ಯವಿಲ್ಲ ಅದನೆಲ್ಲಾ ಸರ್ವೆ ಮಾಡಿ ಪೆನ್ಸಿಂಗ್ ಹಾಕಿಸುತ್ತೇವೆ ಬೋಗಸ್ ದಾಖಲೆಗಳನ್ನು ಸೃಷ್ಟಿಸಿಕೊಂಡು ಅತಿಕ್ರಮಿಸಿಕೊಂಡರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿರುವ ರೈತರಿಗೆ ಸಾಗುವಳಿ ಚೀಟಿ ನೀಡಿ ಖಾತೆ ಮಾಡಲಾಗಿರುವ ಜಮೀನುಗಳಿಗೆ ಹದ್ದುಬಸ್ತು ಗುರುತಿಸುವ ಕಾರ್ಯ ನಡೆಯುತ್ತಿದೆ ರಾಜ್ಯದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಪೋಡಿ ಆಂದೋಲನದಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳಲಿದೆ. ಪಿ ನಂಬರ್ ಇರುವ ಜಮೀನುಗಳಿಗೆ ಪ್ರತ್ಯೇಕ ಪಾಣಿ ನೀಡುವ ಉದ್ದೇಶ ಈ ಆಂದೋಲನ ಪ್ರಮುಖ ಉದ್ದೇಶವಾಗಿದೆ ಎಂದರು
ಕೋಲಾರ ವಿದಾನಸಭಾ ಕ್ಷೇತ್ರದಲ್ಲಿ ೨೦೧೬-೨೦೧೭ ನೇ ಸಾಲಿನಲ್ಲಿ ನೀಡಲಾಗಿರುವ ಸಾಗುವಳಿ ಚೀಟಿಗಳಲ್ಲಿ ಅವ್ಯವಹಾರವಾಗಿದೆ ಎನ್ನುವ ಆರೋಪದಿಂದ ಎಸ್.ಐ.ಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ಸಾಗುವಳಿ ನೀಡಲಾಗಿರುವ ಹಲವು ರೈತರ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಆದರೆ ಅದರಲ್ಲಿ ಯಾವುದು ಅಕ್ರಮವಾಗಿದೆ ಅದು ಬಿಟ್ಟು ಉಳಿದ ಕಡತಗಳನ್ನು ವಾಪಸ್ ನೀಡುವಂತೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಪತ್ರ ಮುಖೇನ ಎಸ್.ಐ.ಟಿ ಅಧಿಕಾರಿಗಳನ್ನು ಕೋರಲಾಗಿದೆ ಶೀಘ್ರದಲ್ಲೇ ಎಲ್ಲಾ ರೈತರಿಗೂ ಪಹಣಿ ನೀಡುವ ಕೆಲಸ ಕೋಲಾರದಲ್ಲಿ ನಡೆಯಲಿದೆ ಎಂದರು.
ಆಶ್ರಯ ಯೋಜನೆಯಲ್ಲಿ ಶೀಘ್ರದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರದ ನಿವೇಶನ ರಹಿತರನ್ನು ಗುರುತಿಸಿ ನಿವೇಶನ ನೀಡುವ ಪ್ರಯತ್ನ ನಡೆಯುತ್ತಿದೆ ತಾಲ್ಲೂಕಿನ ಅರಹಳ್ಳಿ ಬಳಿ ಈಗಾಗಲೇ ಜಮೀನನ್ನು ಗುರುತಿಸಲಾಗಿದೆ. ಅದಕ್ಕೂ ಮೊದಲು ಆಶ್ರಯ ಸಮಿತಿಯ ರಚನೆಯಾಗಬೇಕಿತ್ತು ಸಮಿತಿ ರಚನೆಯಾಗಿದೆ ಶೀಘ್ರದಲ್ಲೇ ಆಶ್ರಯ ಸಮಿತಿ ಸಭೆ ನಡೆಸಿ ತೀರ್ಮಾಣ ಕೈಗೊಳ್ಳಲಾಗುವುದು ಸರ್ಕಾರದಿಂದ ಕೊಂಡು ನಿವೇಶನ ರಹಿತರಿಗೆ ನೀಡುವಂತೆ ಆದೇಶವನ್ನು ಹೊರಡಿಸಲಾಗಿದೆ. ವಿಶೇಷವಾಗಿ ಆಪಾರ್ಟ್ಮೆಂಟ್ ರೀತಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡುವ ಆಲೋಚನೆ ಇದೆ. ಅದರಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಲಭ್ಯಗಳನ್ನು ಒಳಗೊಂಡು ಮಾಡಬೇಕು ಎನ್ನುವುದು ಆಲೋಚನೆ ಇದೆ ಎಂದು ಹೇಳಿದರು.
ಕುಡಾದಲ್ಲಿ ಹಣದ ಕೊರತೆ ಇದೆ ಹಾಗಾಗಿ ಕೂಡಾ ಬಡಾವಣೆಯಲ್ಲಿ ೨೭೦ ಕ್ಕೂ ಹೆಚ್ಚು ಖಾಲಿ ನಿವೇಶಗಳಿಗೆ ಅದನ್ನೆಲ್ಲಾ ಹರಾಜು ಮಾಡಿ ಮಾರಾಟ ಮಾಡಿ ಅದರಿಂದ ಬರುವ ಹಣದಿಂದ ಜಮೀನು ಖರೀದಿ ಮಾಡಿ ಹೊಸ ಬಡಾವಣೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಸರ್ಕಾರದಿಂದ ಅನುಮತಿ ನೀಡಲು ಪತ್ರ ಬರೆಯಲಾಗಿದೆ. ಅನುಮತಿ ಸಿಕ್ಕ ಕೂಡಲೇ ಕೂಡ ಬಡಾವಣೆ ನಿರ್ಮಾಣ ಮಾಡಲಾಗುವುದು ಎಂದರು.
ಕುಡಾ ಬಡಾವಣೆಯಲ್ಲಿ ಹರಾಜು ಪ್ರಕ್ರಿಯೆ ಮೂಲಕ ಮಾರಾಟವಾಗದೇ ಇದ್ದಲ್ಲಿ ಸಿಂಗಲ್ ಏಜೆಂಟರಿಗೆ ಬಡಾವಣೆಯಲ್ಲಿರುವ ನಿವೇಶನಗಳನ್ನು ಮಾರಾಟ ಮಾಡಲಾಗುವುದು ಈ ಹಿಂದೆ ಹರಾಜು ಪ್ರಕ್ರಿಯೆ ನಡೆದಿತ್ತಾದರೂ ಅಭಿವೃದ್ದಿ ಇಲ್ಲದೆ ಇದ್ದುದ್ದರಿಂದ ಖರೀದಿಗೆ ಯಾರು ಮುಂದಾಗಿರಲ್ಲಿ, ಆದರೆ ಈ ಬಾರಿ ಆರೀತಿ ಆಗುವುದಿಲ್ಲ ಎನ್ನುವ ನಂಬಿಕೆ ಇದೆ. ಕೂಡಾ ಬಡಾವಣೆಯನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ನಿವೇಶನ ಕೊಂಡುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ ಎನ್ನುವ ನಿರೀಕ್ಷೆ ಇದೆ ಎಂದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…