ಸರ್ಕಾರಿ ದನದ ಓಣಿ ಜಾಗ ಮತ್ತು ಗ್ರಾಮ ಠಾಣಾ ಗುಂಡು ತೋಪು ಜಾಗ ಒತ್ತುವರಿ ಆರೋಪ: ಭೂಗಳ್ಳರ ಮೇಲೆ ಕ್ರಮಕ್ಕಾಗಿ ಪ್ರಜಾವಿಮೋಚನಾ ಸಮಿತಿ ಒತ್ತಾಯ

ದೊಡ್ಡಬಳ್ಳಾಪುರ : ಸರ್ಕಾರಿ ದನದ ಓಣಿ ಜಾಗ ಮತ್ತು ಗ್ರಾಮ ಠಾಣಾ ಗುಂಡು ತೋಪು ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ಭೂಗಳ್ಳರ ಮೇಲೆ ಕ್ರಮ ಕೈಗೊಂಡು ತೆರವು ಗೊಳಿಸಿ ಬಡವರಿಗೆ ನಿವೇಶನಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಪ್ರಜಾವಿಮೋಚನಾ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ನಮಗೆ ಸ್ವತಂತ್ರ ಬಂದು 78 ವರ್ಷಗಳು ಕಳೆದಿವೆ, ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆಯುತ್ತಿವೆ, ಹಳ್ಳಿಗಾಡಿನ ಪ್ರದೇಶಗಳಲ್ಲಿ ಇನ್ನು ಬಡವರಿಗೆ ಸೂರಿಲ್ಲ ಬಾಬಾ ಸಾಹೇಬರ ಕನಸು ನನಸಾಗೋದು ಯಾವಾಗ? ಇನ್ನು ಎಷ್ಟು ವರ್ಷಗಳ ಕಾಲ ನಾವು ಸೂರು-ನೀರಿಲ್ಲದ ಬದುಕನ್ನು ಅನುಭವಿಸಬೇಕು ಎಂದು ಪ್ರಶ್ನಿಸಿದ ಅವರು, ಬಡವರಿಗೆ ಸೀಗಬೇಕಾದ ಭೂಮಿ ಭೂಗಳ್ಳರ ಪಾಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

ತಾಲ್ಲೂಕು ತೂಬಗೆರೆ ಹೋಬಳಿ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸ ನಂ 132ರಲ್ಲಿ ಗುಂಡು ತೋಪು ಜಮೀನನ್ನು ಭೂಮಾಲಿಕರು ಕಬಳಿಸಿದ್ದಾರೆ. ಅಳತೆ ಕಾರ್ಯ ಕೈಗೊಂಡು ತೆರವು ಗೊಳಿಸಬೇಕು ಮತ್ತು ಗೂಳ್ಯ ಗ್ರಾಮದ ಧನದ ಓಣಿ ಜಾಗ ಸುಮಾರು 7ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಭೂಮಿಯನ್ನು ಅಕ್ಕ ಪಕ್ಕದ ಜಮೀನಿನ ಮಾಲಿಕರು ಒತ್ತುವರಿ ಮಾಡಿಕೊಂಡಿದ್ದಾರೆ. ಗ್ರಾಮ ಠಾಣಾಗೆ ಸೇರಿದ 6ಎಕರೆ ಜಾಗವಿದ್ದು ಭೂಗಳ್ಳರು ಅದನ್ನೂ ಕಬಳಿಸಿದ್ದಾರೆ. ಹೆಗ್ಗಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿಯನ್ನು ಸಹ ಕೊಟ್ಟಿದ್ದೆವೆ. ಯಾವುದೇ ಕ್ರಮ ಕೈಗೊಂಡಿಲ್ಲ, ಪಿಡಿಒ ಅವರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರಿ ಧನದ ಓಣಿ ಜಾಗದಲ್ಲಿ ಯಾವುದೇ ದಾಖಲಾತಿಗಳಿಲ್ಲದೆ ಮನೆಗಳನ್ನು ನಿರ್ಮಿಸಿದ್ದಾರೆ. ಇಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತೆರವು ಗೊಳಿಸಬೇಕು ಎಂದು ಒತ್ತಾಯಿಸಿದರು.

ಹೆಗ್ಗಡಿಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೊಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ಕೆಸ್ತೂರು ಗ್ರಮದಲ್ಲಿ ಸುಮಾರು 70 ಕ್ಕೂ ಹೆಚ್ಚು ದಲಿತ ಕುಟುಂಬಗಳಿದ್ದು, ಇದುವರೆಗೂ ಸ್ಮಶಾನವಿಲ್ಲ ಗ್ರಾಮದ ಸನಂ 131 ರಲ್ಲಿ 8 ಎಕರೆ ಗೋಮಾಳವಿದ್ದು, ಅದರಲ್ಲಿ ಒಂದು ಎಕರೆ ಭೂಮಿಯನ್ನು ದಲಿತರ ಸ್ಮಶಾನಕ್ಕೆ ಮೀಸಲಿಡಬೇಕು ಎಂದು ಹೇಳಿದರು.

ಕಸಬಾ ಹೋಬಳಿಯ ಸಿದ್ದೇನಾಯಕನಹಳ್ಳಿ ಗ್ರಾಮದ ಸ ನಂ 10 ರಲ್ಲಿ 6 ಎಕರೆ 15 ಗುಂಟೆ, ಬಂಡಿದಾರಿ ಖರಾಬು ಜಮೀನಿದ್ದು 3 ಎಕರೆ ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ ಉಳಿಕೆ ಖಾಲಿ ಇರುವ ಜಾಗದಲ್ಲಿ ಎಲ್ಲಾಜಾತಿಯ ಬಡವರಿಗೆ ನಿವೇಶನಗಳನ್ನು ಕಲ್ಪಿಸಿ ಕೊಡಬೇಕು. ತೂಬಗೆರೆ ಹೋಬಳಿ ಗೂಳ್ಯ ನಂದಿಗುಂದ ಗ್ರಾಮದ ಸ. ನಂ 125 ರಲ್ಲಿ 0 11ಗುಂಟೆ ಸರ್ಕಾರಿ ತಿಪ್ಪೇಹಳ್ಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಪ್ರಕರಣ ದಾಖಲಿಸಿ ಜಮೀನು ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಹಕ್ಕೊತ್ತಾಯಗಳು

1). ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೊಬಳಿ ಕೆಸ್ತೂರು ಗ್ರಾಮದ ದಲಿತ ಜನಾಂಗಕ್ಕೆ ಕೂಡಲೆ ಸ್ಮಶಾನ ಭೂಮಿಯನ್ನು ಅಳತೆ ಮಾಡಿ ಪಹಣಿಯಲ್ಲಿ ನಮೂದಿಸುವುದು.

2) ದೊಡ್ಡಬಳ್ಳಾಪುರ ತಾಲ್ಲೂಕು ತೂಬಗೆರೆ ಹೋಬಳಿ ಗೂಳ್ಯ ನಂದಿಗುಂದ ಗ್ರಾಮದಲ್ಲಿ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಡಾ ಬಿ ಆರ್ ಅಂಬೇಡ್ಕರ್ ಭವನಕ್ಕೆ ಸ ನಂ 7ರಲ್ಲಿ ಜಾಗವನ್ನು ಗುರುತಿಸಬೇಕು.

3) ದೊಡ್ಡಬಳ್ಳಾಪುರ ತಾಲ್ಲೂಕು ತೂಬಗೆರೆ ಹೋಬಳಿ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ . ವರ್ಗಾವಣೆ ಮಾಡಬೇಕು

4) ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಸಿದ್ದೇನಾಯಕನ ಹಳ್ಳಿ ಗ್ರಾಮದಲ್ಲಿ ಬಂಡಿದಾರಿ ಖರಾಬು 6 ಎಕರೆ 15 ಗುಂಟೆ ಜಮೀನಿದ್ದು ಖಾಲಿ ಇರುವ ಜಮೀನಿನಲ್ಲಿ ಬಡವರಿಗೆ ನಿವೇಶನಗಳನ್ನು ಕಲ್ಪಿಸಿ ಕೊಡಬೇಕು.

ಎಂದು ಒತ್ತಾಯಿಸಿ ಎಸಿ ಕಚೇರಿಯ ತಹಶೀಲ್ದಾರ್ ಮೂಲಕ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪ್ರಜಾವಿಮೋಚನಾ ಸಮಿತಿ ರಾಜ್ಯಾಧ್ಯಕ್ಷ ಜೈಭೀಮ್ ಮಧುರೆ, ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೋನಿಯಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು (ದಾಸ), ತಾಲ್ಲೂಕು ಅಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್, ಉಪಾಧ್ಯಕ್ಷ ನಟರಾಜು, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಸುಧಾ, ಗೂಳ್ಯ ಮುನಿದಾಸಪ್ಪ, ಯಲಹಂಕ ಅಧ್ಯಕ್ಷ ರಾಜು, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಹೊಸಹೂಡ್ಯ ಅರ್ಜುನ್, ಕನಕೇನಹಳ್ಳಿ ನಾಗಮ್ಮ, ಪ್ರಜಾವಿಮೋಚನಾ ಚಳುವಳಿ ತಾಲ್ಲೂಕು ಅಧ್ಯಕ್ಷ ಜಿ.ಕೆ.ನಾರಾಯಣಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

15 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

17 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

21 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago