ಸರ್ಕಾರಿ ನೌಕರರಿಗೆ ದಸರಾ ಬಂಪರ್ ಬಹುಮಾನ ನೀಡಿರುವ ರಾಜ್ಯ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ಹಾಗೂ UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ಹೆಚ್ಚಿಸಿ ಅಂದರೆ ಶೇ 46ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ರೂ.1,109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.
ಕಳೆದ ಬಾರಿ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗಿ ಮೂಲ ವೇತನದ ಶೇಕಡ 31ರಿಂದ ಶೇಕಡ 35ಕ್ಕೆ ಪರಿಷ್ಕರಿಸಲಾಗಿತ್ತು.
ನಮ್ಮ ಈ ಆದೇಶವು ರಾಜ್ಯ ಸರ್ಕಾರಿ ನೌಕರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…