ಸರ್ಕಾರಿ ನೌಕರರಿಗೆ ದಸರಾ ಬಂಪರ್ ಬಹುಮಾನ ನೀಡಿರುವ ರಾಜ್ಯ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ಹಾಗೂ UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ಹೆಚ್ಚಿಸಿ ಅಂದರೆ ಶೇ 46ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ರೂ.1,109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.
ಕಳೆದ ಬಾರಿ ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗಿ ಮೂಲ ವೇತನದ ಶೇಕಡ 31ರಿಂದ ಶೇಕಡ 35ಕ್ಕೆ ಪರಿಷ್ಕರಿಸಲಾಗಿತ್ತು.
ನಮ್ಮ ಈ ಆದೇಶವು ರಾಜ್ಯ ಸರ್ಕಾರಿ ನೌಕರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…