ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಅಭಿನಂದನೆ

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ, ಸಂದೀಪ್‌ ಬಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ಸಂದೀಪ್ ಅವರು ತಿಳಿಸಿದ್ದಾರೆ.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ. ಸರ್ಕಾರದ ನಿರ್ಣಯಕ್ಕೆ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಸಹಮತ ಸೂಚಿಸಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

1 hour ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

5 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago