ಕೋಲಾರ: ರಾಜ್ಯ ಸರ್ಕಾರದ ಹೊಸ ಸುತ್ತೋಲೆಯ ಪ್ರಕಾರ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್ ಬಳಸುವಂತೆ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಮಂಗಳವಾರ ಉಪ ತಹಶಿಲ್ದಾರ್ ಹನ್ಸಾ ಮರಿಯ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಪಾರೇಹೊಸಹಳ್ಳಿ ಎಂ.ನವೀನ್ ಕುಮಾರ್ ಮಾತನಾಡಿ ರಾಜ್ಯ ಸರ್ಕಾರದ ನೌಕರರು ತಮ್ಮ ಕೊರಳಲ್ಲಿ ಕರ್ನಾಟಕ ರಾಜ್ಯದ ಬಾವುಟದ ಹಳದಿ ಮತ್ತು ಕೆಂಪು ಬಣ್ಣದ ಟ್ಯಾಗ್ ಹಾಕುವುದು ಕಡ್ಡಾಯವಾಗಿದೆ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಅದನ್ನು ಪ್ರತಿಯೊಬ್ಬ ನೌಕರರು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಮೇಶ್ ಮಾತನಾಡಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತರು ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಧರಿಸಬೇಕು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮನಾಗಿದ್ದು ಇದೀಗ ಸರ್ಕಾರಿ ನೌಕರರ ಗುರುತಿನ ಟ್ಯಾಗ್ನಲ್ಲಿ ಕರ್ನಾಟಕದ ಬಾವುಟದ ಬಣ್ಣ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್, ತಾಲೂಕು ಗೌರವ ಅಧ್ಯಕ್ಷ ರಮೇಶ್, ಅಧ್ಯಕ್ಷ ಮಂಜುನಾಥ್, ಮುಖಂಡರಾದ ಸುಗಟೂರು ಚಲಪತಿಗೌಡ, ನಂದೀಶ್, ಅನಿಲ್ ಕುಮಾರ್, ನಾಗರಾಜ್, ಅಂಜಿನಪ್ಪ, ಶ್ರೀನಾಥ್ ಮುಂತಾದವರು ಇದ್ದರು.
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…