ಕೋಲಾರ: ರಾಜ್ಯ ಸರ್ಕಾರದ ಹೊಸ ಸುತ್ತೋಲೆಯ ಪ್ರಕಾರ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್ ಬಳಸುವಂತೆ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಮಂಗಳವಾರ ಉಪ ತಹಶಿಲ್ದಾರ್ ಹನ್ಸಾ ಮರಿಯ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಪಾರೇಹೊಸಹಳ್ಳಿ ಎಂ.ನವೀನ್ ಕುಮಾರ್ ಮಾತನಾಡಿ ರಾಜ್ಯ ಸರ್ಕಾರದ ನೌಕರರು ತಮ್ಮ ಕೊರಳಲ್ಲಿ ಕರ್ನಾಟಕ ರಾಜ್ಯದ ಬಾವುಟದ ಹಳದಿ ಮತ್ತು ಕೆಂಪು ಬಣ್ಣದ ಟ್ಯಾಗ್ ಹಾಕುವುದು ಕಡ್ಡಾಯವಾಗಿದೆ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಅದನ್ನು ಪ್ರತಿಯೊಬ್ಬ ನೌಕರರು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಮೇಶ್ ಮಾತನಾಡಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತರು ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಧರಿಸಬೇಕು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮನಾಗಿದ್ದು ಇದೀಗ ಸರ್ಕಾರಿ ನೌಕರರ ಗುರುತಿನ ಟ್ಯಾಗ್ನಲ್ಲಿ ಕರ್ನಾಟಕದ ಬಾವುಟದ ಬಣ್ಣ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್, ತಾಲೂಕು ಗೌರವ ಅಧ್ಯಕ್ಷ ರಮೇಶ್, ಅಧ್ಯಕ್ಷ ಮಂಜುನಾಥ್, ಮುಖಂಡರಾದ ಸುಗಟೂರು ಚಲಪತಿಗೌಡ, ನಂದೀಶ್, ಅನಿಲ್ ಕುಮಾರ್, ನಾಗರಾಜ್, ಅಂಜಿನಪ್ಪ, ಶ್ರೀನಾಥ್ ಮುಂತಾದವರು ಇದ್ದರು.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…