ಕೋಲಾರ: ರಾಜ್ಯ ಸರ್ಕಾರದ ಹೊಸ ಸುತ್ತೋಲೆಯ ಪ್ರಕಾರ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್ ಬಳಸುವಂತೆ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಮಂಗಳವಾರ ಉಪ ತಹಶಿಲ್ದಾರ್ ಹನ್ಸಾ ಮರಿಯ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಪಾರೇಹೊಸಹಳ್ಳಿ ಎಂ.ನವೀನ್ ಕುಮಾರ್ ಮಾತನಾಡಿ ರಾಜ್ಯ ಸರ್ಕಾರದ ನೌಕರರು ತಮ್ಮ ಕೊರಳಲ್ಲಿ ಕರ್ನಾಟಕ ರಾಜ್ಯದ ಬಾವುಟದ ಹಳದಿ ಮತ್ತು ಕೆಂಪು ಬಣ್ಣದ ಟ್ಯಾಗ್ ಹಾಕುವುದು ಕಡ್ಡಾಯವಾಗಿದೆ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಅದನ್ನು ಪ್ರತಿಯೊಬ್ಬ ನೌಕರರು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಮೇಶ್ ಮಾತನಾಡಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತರು ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಧರಿಸಬೇಕು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮನಾಗಿದ್ದು ಇದೀಗ ಸರ್ಕಾರಿ ನೌಕರರ ಗುರುತಿನ ಟ್ಯಾಗ್ನಲ್ಲಿ ಕರ್ನಾಟಕದ ಬಾವುಟದ ಬಣ್ಣ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್, ತಾಲೂಕು ಗೌರವ ಅಧ್ಯಕ್ಷ ರಮೇಶ್, ಅಧ್ಯಕ್ಷ ಮಂಜುನಾಥ್, ಮುಖಂಡರಾದ ಸುಗಟೂರು ಚಲಪತಿಗೌಡ, ನಂದೀಶ್, ಅನಿಲ್ ಕುಮಾರ್, ನಾಗರಾಜ್, ಅಂಜಿನಪ್ಪ, ಶ್ರೀನಾಥ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…