ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ, ಸಂದೀಪ್ ಬಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ಸಂದೀಪ್ ಅವರು ತಿಳಿಸಿದ್ದಾರೆ.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ. ಸರ್ಕಾರದ ನಿರ್ಣಯಕ್ಕೆ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಸಹಮತ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…