ಸರ್ಕಾರಿ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ: 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ….

ಕರ್ನಾಟಕ ಕ್ಯಾಬಿನೆಟ್ ಐತಿಹಾಸಿಕ ನಿರ್ಣಯ. ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರೀ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ. 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ. ದೊರಕಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗೆ (KASS-NPE)” ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ಈ ಯೋಜನೆಯು ESIC, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ArK), ಯಶಸ್ವಿನಿ ಮುಂತಾದ ಯಾವುದೇ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಳಗೊಳ್ಳದ ಸಿಬ್ಬಂದಿ ಹಾಗು ಅವರ ಅವಲಂಬಿತರನ್ನು ಒಳಗೊಳ್ಳಲಿದೆ. ಈ ಯೋಜನೆಗಾಗಿ ಪ್ರತಿ ತಿಂಗಳು ಸಿಬ್ಬಂದಿ 100 ರೂಪಾಯಿ ಭರಿಸಿದರೆ, ರಾಜ್ಯ ಸರ್ಕಾರವೂ ಸಹ 100 ರೂಪಾಯಿ ಭರಿಸಲಿದೆ. ರಾಜ್ಯ ಸರ್ಕಾರವು ಈ ಯೋಜನೆಗಾಗಿ 36 ಕೋಟಿ ವೆಚ್ಚ ಮಾಡಲಿದೆ ಎಂದು ತಿಳಿಸಿದರು.

ಯಾವುದೇ ಆರೋಗ್ಯ ಯೋಜನೆಗಳ ಲಾಭ ದೊರಕದ ಕೆಳ ಮಧ್ಯಮ ವರ್ಗಕ್ಕೆ ಆರೋಗ್ಯದ ಭದ್ರತೆ ನೀಡುವ ದೃಷ್ಟಿಯಿಂದ ಕಳೆದ ಬಜೆಟ್’ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು ದೇಶದಲ್ಲೇ ಇದೊಂದು ಮಾದರಿ ಯೋಜನೆಯಾಗಲಿದೆ ಎಂದರು.

ರಾಜ್ಯದ ಇತಿಹಾಸದಲ್ಲಿ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತೆಗೆದುಕೊಂಡು ಹೋದ ಹೆಗ್ಗಳಿಕೆ ನಮ್ಮ ಸರ್ಕಾರದ್ದು. ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಜೊತೆ ಜೊತೆಗೆ ಇದೀಗ ನಮ್ಮ ಆರೋಗ್ಯ ಇಲಾಖೆಯು ಸಂಚಾರಿ ಆರೋಗ್ಯ ಘಟಕಗಳ ಮೂಲಕ ಸುಮಾರು 15.97 ಕೋಟಿ ರೂಪಾಯಿ ವೆಚ್ಚದಲ್ಲಿ ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಮುಂದಾಗಿದೆ ಎಂದು ಹೇಳಿದರು.

ಸಂಚಾರಿ ಆರೋಗ್ಯ ಘಟಕಗಳ ವಿಶೇಷತೆ

▪️ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳು, ಸಂಕಷ್ಟದಲ್ಲಿರುವ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು (ಪಿವಿಟಿಜಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ಅವರ ಮನೆಯ ಬಾಗಿಲಲ್ಲೇ ನೀಡುವ ಉದ್ದೇಶದಿಂದ 82 ಸಂಚಾರಿ ಆರೋಗ್ಯ ಘಟಕಗಳು ಕಾರ್ಯಾಚರಣೆ ನಡೆಸಲಿವೆ.

▪️ಇವು ಸಂಚಾರಿ ಚಿಕಿತ್ಸಾಲಯಗಳಾಗಿದ್ದು, ಈ ಘಟಕಗಳಲ್ಲಿ ರೋಗ ತಪಾಸಣೆ, ರೋಗ ನಿರ್ಣಯ, ಚಿಕಿತ್ಸೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗಳು ಸಿಗಲಿವೆ.

▪️ಈ ಸಂಚಾರಿ ಆರೋಗ್ಯ ಘಟಕಗಳಲ್ಲಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಂತ್ರಜ್ಞರು, ಸಹಾಯಕರು ಕಾರ್ಯನಿರ್ವಹಿಸಲಿದ್ದಾರೆ.

▪️ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಸಂಚಾರಿ ಆರೋಗ್ಯ ಘಟಕಗಳು ಕಾರ್ಯ ನಿರ್ವಹಿಸಲಿವೆ.

▪️ಸಂಚಾರಿ ಆರೋಗ್ಯ ಘಟಕಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳಂತೆ ಈ ಘಟಕಗಳು ಕಾರ್ಯ ನಿರ್ವಹಿಸಲಿವೆ.

▪️ಈ ಹಿಂದೆ ಪಿಪಿಪಿ ಮಾದರಿಯಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ನಿರ್ವಹಿಸಲಾಗುತ್ತಿತ್ತು. ಪಾರದರ್ಶಕತೆ ಮತ್ತು ಕಾರ್ಯಾಚರಣಾ ವೆಚ್ಚ ಉಳಿತಾಯ ಮಾಡಲು ಇನ್ನು ಮುಂದೆ ಆರೋಗ್ಯ ಇಲಾಖೆಯ ವತಿಯಿಂದಲೇ ನಿರ್ವಹಿಸಲು ತೀರ್ಮಾನಿಸಲಾಗಿದೆ.

Ramesh Babu

Journalist

Recent Posts

Immediate Gambling Establishment Play: The Practical Way to Delight In Online Gambling

For passionate casino enthusiasts and wagering lovers, on-line gambling establishments have changed the means we…

1 hour ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 hour ago

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

11 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

21 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

24 hours ago

Instant Play Casino

Instant play casinos allow you to play casino games online without installing any software. These…

2 days ago