ಸರ್ಕಾರಿ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ: 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ….

ಕರ್ನಾಟಕ ಕ್ಯಾಬಿನೆಟ್ ಐತಿಹಾಸಿಕ ನಿರ್ಣಯ. ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರೀ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ. 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ. ದೊರಕಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗೆ (KASS-NPE)” ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ಈ ಯೋಜನೆಯು ESIC, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ArK), ಯಶಸ್ವಿನಿ ಮುಂತಾದ ಯಾವುದೇ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಳಗೊಳ್ಳದ ಸಿಬ್ಬಂದಿ ಹಾಗು ಅವರ ಅವಲಂಬಿತರನ್ನು ಒಳಗೊಳ್ಳಲಿದೆ. ಈ ಯೋಜನೆಗಾಗಿ ಪ್ರತಿ ತಿಂಗಳು ಸಿಬ್ಬಂದಿ 100 ರೂಪಾಯಿ ಭರಿಸಿದರೆ, ರಾಜ್ಯ ಸರ್ಕಾರವೂ ಸಹ 100 ರೂಪಾಯಿ ಭರಿಸಲಿದೆ. ರಾಜ್ಯ ಸರ್ಕಾರವು ಈ ಯೋಜನೆಗಾಗಿ 36 ಕೋಟಿ ವೆಚ್ಚ ಮಾಡಲಿದೆ ಎಂದು ತಿಳಿಸಿದರು.

ಯಾವುದೇ ಆರೋಗ್ಯ ಯೋಜನೆಗಳ ಲಾಭ ದೊರಕದ ಕೆಳ ಮಧ್ಯಮ ವರ್ಗಕ್ಕೆ ಆರೋಗ್ಯದ ಭದ್ರತೆ ನೀಡುವ ದೃಷ್ಟಿಯಿಂದ ಕಳೆದ ಬಜೆಟ್’ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು ದೇಶದಲ್ಲೇ ಇದೊಂದು ಮಾದರಿ ಯೋಜನೆಯಾಗಲಿದೆ ಎಂದರು.

ರಾಜ್ಯದ ಇತಿಹಾಸದಲ್ಲಿ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತೆಗೆದುಕೊಂಡು ಹೋದ ಹೆಗ್ಗಳಿಕೆ ನಮ್ಮ ಸರ್ಕಾರದ್ದು. ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಜೊತೆ ಜೊತೆಗೆ ಇದೀಗ ನಮ್ಮ ಆರೋಗ್ಯ ಇಲಾಖೆಯು ಸಂಚಾರಿ ಆರೋಗ್ಯ ಘಟಕಗಳ ಮೂಲಕ ಸುಮಾರು 15.97 ಕೋಟಿ ರೂಪಾಯಿ ವೆಚ್ಚದಲ್ಲಿ ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಮುಂದಾಗಿದೆ ಎಂದು ಹೇಳಿದರು.

ಸಂಚಾರಿ ಆರೋಗ್ಯ ಘಟಕಗಳ ವಿಶೇಷತೆ

▪️ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳು, ಸಂಕಷ್ಟದಲ್ಲಿರುವ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು (ಪಿವಿಟಿಜಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ಅವರ ಮನೆಯ ಬಾಗಿಲಲ್ಲೇ ನೀಡುವ ಉದ್ದೇಶದಿಂದ 82 ಸಂಚಾರಿ ಆರೋಗ್ಯ ಘಟಕಗಳು ಕಾರ್ಯಾಚರಣೆ ನಡೆಸಲಿವೆ.

▪️ಇವು ಸಂಚಾರಿ ಚಿಕಿತ್ಸಾಲಯಗಳಾಗಿದ್ದು, ಈ ಘಟಕಗಳಲ್ಲಿ ರೋಗ ತಪಾಸಣೆ, ರೋಗ ನಿರ್ಣಯ, ಚಿಕಿತ್ಸೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗಳು ಸಿಗಲಿವೆ.

▪️ಈ ಸಂಚಾರಿ ಆರೋಗ್ಯ ಘಟಕಗಳಲ್ಲಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಂತ್ರಜ್ಞರು, ಸಹಾಯಕರು ಕಾರ್ಯನಿರ್ವಹಿಸಲಿದ್ದಾರೆ.

▪️ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಸಂಚಾರಿ ಆರೋಗ್ಯ ಘಟಕಗಳು ಕಾರ್ಯ ನಿರ್ವಹಿಸಲಿವೆ.

▪️ಸಂಚಾರಿ ಆರೋಗ್ಯ ಘಟಕಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳಂತೆ ಈ ಘಟಕಗಳು ಕಾರ್ಯ ನಿರ್ವಹಿಸಲಿವೆ.

▪️ಈ ಹಿಂದೆ ಪಿಪಿಪಿ ಮಾದರಿಯಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ನಿರ್ವಹಿಸಲಾಗುತ್ತಿತ್ತು. ಪಾರದರ್ಶಕತೆ ಮತ್ತು ಕಾರ್ಯಾಚರಣಾ ವೆಚ್ಚ ಉಳಿತಾಯ ಮಾಡಲು ಇನ್ನು ಮುಂದೆ ಆರೋಗ್ಯ ಇಲಾಖೆಯ ವತಿಯಿಂದಲೇ ನಿರ್ವಹಿಸಲು ತೀರ್ಮಾನಿಸಲಾಗಿದೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

21 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

22 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago