ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು
ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ
ಆಕಾಂಕ್ಷಿ ಅಜಯ್ಕುಮಾರ್, ತಾವು ಆಯ್ಕೆಯಾದರೆ ಸಂಘವನ್ನು ನೌಕರರ ಸ್ನೇಹಿಯಾಗಿ
ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಕೇಂದ್ರದ ನೌಕರರ ಭವನವನ್ನು ಈಗಾಗಲೇ ಕೆಡವಲಾಗಿದ್ದು, ಆಯ್ಕೆಯಾದ ಕೂಡಲೇ ಮೊದಲ
ಆದ್ಯತೆಯಾಗಿ ಸುಸಜ್ಜಿತ ನೌಕರರ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ
ರೂಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಿರಿಯರು ಒಂದೆಡೆ ಸೇರಿ ಅವಿರೋಧವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಿದರೆ ನಮ್ಮದೇನು ತಕರಾರಿಲ್ಲ. ಚುನಾವಣೆ ನಡೆದರೆ ನಾವು ಪ್ರಬಲವಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಶಾಸಕರಿಗೆ ಸಹಕಾರ ರತ್ನ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನಿಸಿದೆವು. ಅದೇ ಸಂದರ್ಭದಲ್ಲಿ ನಾವೂ ಪದಾಧಿಕಾರಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಮಗೂ ಅಭಿನಂದಿಸಿದ್ದು, ಯಾವುದೇ ಕಾರಣಕ್ಕೂ ಅವರು ಚುನಾವಣೆಯಲ್ಲಿ ತೊಡಗಿಸಿಕೊಂಡಿಲ್ಲ.
ಆದರೆ, ಅವಿರೋಧವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಂತೆ ಹಾಗೂ ಯಾರೇ
ಅಧ್ಯಕ್ಷರಾದರೂ ರೈತರು, ಬಡವರಿಗೆ ಸಹಕಾರ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದರು.
ನೌಕರರ ಸಂಘದಲ್ಲಿ ಯಾವುದೇ ರೀತಿಯ ಗುಂಪುಗಾರಿಕೆಯಿಲ್ಲ. ಯಾವುದೇ ರೀತಿಯ
ಪ್ರಭಾವಗಳನ್ನು ಸಹ ಯಾರೂ ಹೇರುತ್ತಿಲ್ಲ. ಹಣ ಹಂಚಿಕೆ ಮಾಡುತ್ತಿರುವ ಬಗ್ಗೆಯೂ
ಮಾಹಿತಿಯಿಲ್ಲ. ಆದರೆ, ನಾವು ಪ್ರಾಮಾಣಿಕವಾಗಿ ಚುನಾವಣೆಯನ್ನು ನಡೆಸಿ ಗೆಲ್ಲುತ್ತೇವೆ
ಎಂದು ಅಜಯ್ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಲೂರು ತಾಲ್ಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್ ಚೌಡಪ್ಪ, ಮಾಜಿ ಖಜಾಂಚಿ ವಿಜಯ್, ಮುಖಂಡರಾದ ಅನಿಲ್ ಕುಮಾರ್, ಅಪ್ಪೇಗೌಡ, ರಾಜೇಂದ್ರ ಸಿಂಗ್, ಮಂಜುನಾಥ್, ಮುಂತಾದವರು ಇದ್ದರು.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…