Categories: ಕೋಲಾರ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ನಾಮಪತ್ರ ಸಲ್ಲಿಕೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು

ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ
ಆಕಾಂಕ್ಷಿ ಅಜಯ್‍ಕುಮಾರ್, ತಾವು ಆಯ್ಕೆಯಾದರೆ ಸಂಘವನ್ನು ನೌಕರರ ಸ್ನೇಹಿಯಾಗಿ
ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಕೇಂದ್ರದ ನೌಕರರ ಭವನವನ್ನು ಈಗಾಗಲೇ ಕೆಡವಲಾಗಿದ್ದು, ಆಯ್ಕೆಯಾದ ಕೂಡಲೇ ಮೊದಲ
ಆದ್ಯತೆಯಾಗಿ ಸುಸಜ್ಜಿತ ನೌಕರರ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ
ರೂಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಿರಿಯರು ಒಂದೆಡೆ ಸೇರಿ ಅವಿರೋಧವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಿದರೆ ನಮ್ಮದೇನು ತಕರಾರಿಲ್ಲ. ಚುನಾವಣೆ ನಡೆದರೆ ನಾವು ಪ್ರಬಲವಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಶಾಸಕರಿಗೆ ಸಹಕಾರ ರತ್ನ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನಿಸಿದೆವು. ಅದೇ ಸಂದರ್ಭದಲ್ಲಿ ನಾವೂ ಪದಾಧಿಕಾರಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಮಗೂ ಅಭಿನಂದಿಸಿದ್ದು, ಯಾವುದೇ ಕಾರಣಕ್ಕೂ ಅವರು ಚುನಾವಣೆಯಲ್ಲಿ ತೊಡಗಿಸಿಕೊಂಡಿಲ್ಲ.
ಆದರೆ, ಅವಿರೋಧವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಂತೆ ಹಾಗೂ ಯಾರೇ
ಅಧ್ಯಕ್ಷರಾದರೂ ರೈತರು, ಬಡವರಿಗೆ ಸಹಕಾರ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದರು.

ನೌಕರರ ಸಂಘದಲ್ಲಿ ಯಾವುದೇ ರೀತಿಯ ಗುಂಪುಗಾರಿಕೆಯಿಲ್ಲ. ಯಾವುದೇ ರೀತಿಯ
ಪ್ರಭಾವಗಳನ್ನು ಸಹ ಯಾರೂ ಹೇರುತ್ತಿಲ್ಲ. ಹಣ ಹಂಚಿಕೆ ಮಾಡುತ್ತಿರುವ ಬಗ್ಗೆಯೂ
ಮಾಹಿತಿಯಿಲ್ಲ. ಆದರೆ, ನಾವು ಪ್ರಾಮಾಣಿಕವಾಗಿ ಚುನಾವಣೆಯನ್ನು ನಡೆಸಿ ಗೆಲ್ಲುತ್ತೇವೆ
ಎಂದು ಅಜಯ್‍ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಲೂರು ತಾಲ್ಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್ ಚೌಡಪ್ಪ, ಮಾಜಿ‌ ಖಜಾಂಚಿ ವಿಜಯ್, ಮುಖಂಡರಾದ ಅನಿಲ್ ಕುಮಾರ್, ಅಪ್ಪೇಗೌಡ, ರಾಜೇಂದ್ರ ಸಿಂಗ್, ಮಂಜುನಾಥ್, ಮುಂತಾದವರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

5 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago