ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ವಂದಿಸುವುದು ನೌಕರರ ಹಿತ ಕಾಪಾಡಲು ನೂತನ ಸಮಿತಿ ಕೆಲಸ ಮಾಡಲಿ ಜೊತೆಗೆ ಕಾರ್ಯಾಂಗ ಶಾಸಕಾಂಗ ಒಟ್ಟಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರಿಗೆ ಐದು ವರ್ಷದಿಂದ ಕಾದಿದ್ದ ಕತ್ತಲು ಇವತ್ತು ಬೆಳಕಾಗಿದೆ ಎಂಎಲ್ಎ ಕೊತ್ತೂರು ಮಂಜುನಾಥ್, ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡವಾಗಿ ಕೆಲಸ ಮಾಡಿದ್ದಕ್ಕೆ ನೌಕರರ ಜಯವಾಗಿದೆ ಮುಂದೆ ಆಡಳಿತದೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಮಾದರಿ ಜಿಲ್ಲೆ ಮಾಡೋಣ ಎಂದರು.
ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಇವತ್ತಿನ ಗೆಲುವಿನೊಂದಿಗೆ ಜವಾಬ್ದಾರಿ ಹೆಚ್ಚಿದೆ ಹಿಂದೆ ಐದು ವರ್ಷದಲ್ಲಿ ಸರಿಯಾಗಿ ಸಭೆಗಳು ನಡೆದಿಲ್ಲ ಮುಂದೆ ಹಾಗೇ ನಡೆಯದ ರೀತಿಯಲ್ಲಿ ಶಾಸಕಾಂಗ ಕಾರ್ಯಾಂಗದ ಜೊತೆಗೆ ಹೋಗೋಣ ನೌಕರ ಭವನಕ್ಕೆ ಮೊದಲ ಸಭೆಯಲ್ಲಿ ತೀರ್ಮಾನ ಮಾಡೋಣ ಜೊತೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಹಂತ ಹಂತವಾಗಿ ಹೋಗೋಣ ಎಂದರು.
ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿ ಮುರಳಿ ಮೋಹನ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಪದಾಧಿಕಾರಿಗಳಾದ, ಎಸ್. ಚೌಡಪ್ಪ, ವಿಜಯ್, ಕೆ.ಟಿ ನಾಗರಾಜ್ ಅಪ್ಪೇಗೌಡ, ಶಿವಕುಮಾರ್, ಎಂ ನಾಗರಾಜ್, ಅನಿಲ್ ಕುಮಾರ್, ಶ್ರೀರಾಮ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಮುಂತಾದವರು ಇದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…