ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ವಂದಿಸುವುದು ನೌಕರರ ಹಿತ ಕಾಪಾಡಲು ನೂತನ ಸಮಿತಿ ಕೆಲಸ ಮಾಡಲಿ ಜೊತೆಗೆ ಕಾರ್ಯಾಂಗ ಶಾಸಕಾಂಗ ಒಟ್ಟಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರಿಗೆ ಐದು ವರ್ಷದಿಂದ ಕಾದಿದ್ದ ಕತ್ತಲು ಇವತ್ತು ಬೆಳಕಾಗಿದೆ ಎಂಎಲ್ಎ ಕೊತ್ತೂರು ಮಂಜುನಾಥ್, ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡವಾಗಿ ಕೆಲಸ ಮಾಡಿದ್ದಕ್ಕೆ ನೌಕರರ ಜಯವಾಗಿದೆ ಮುಂದೆ ಆಡಳಿತದೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಮಾದರಿ ಜಿಲ್ಲೆ ಮಾಡೋಣ ಎಂದರು.
ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಇವತ್ತಿನ ಗೆಲುವಿನೊಂದಿಗೆ ಜವಾಬ್ದಾರಿ ಹೆಚ್ಚಿದೆ ಹಿಂದೆ ಐದು ವರ್ಷದಲ್ಲಿ ಸರಿಯಾಗಿ ಸಭೆಗಳು ನಡೆದಿಲ್ಲ ಮುಂದೆ ಹಾಗೇ ನಡೆಯದ ರೀತಿಯಲ್ಲಿ ಶಾಸಕಾಂಗ ಕಾರ್ಯಾಂಗದ ಜೊತೆಗೆ ಹೋಗೋಣ ನೌಕರ ಭವನಕ್ಕೆ ಮೊದಲ ಸಭೆಯಲ್ಲಿ ತೀರ್ಮಾನ ಮಾಡೋಣ ಜೊತೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಹಂತ ಹಂತವಾಗಿ ಹೋಗೋಣ ಎಂದರು.
ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿ ಮುರಳಿ ಮೋಹನ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಪದಾಧಿಕಾರಿಗಳಾದ, ಎಸ್. ಚೌಡಪ್ಪ, ವಿಜಯ್, ಕೆ.ಟಿ ನಾಗರಾಜ್ ಅಪ್ಪೇಗೌಡ, ಶಿವಕುಮಾರ್, ಎಂ ನಾಗರಾಜ್, ಅನಿಲ್ ಕುಮಾರ್, ಶ್ರೀರಾಮ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಮುಂತಾದವರು ಇದ್ದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…