ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ವಂದಿಸುವುದು ನೌಕರರ ಹಿತ ಕಾಪಾಡಲು ನೂತನ ಸಮಿತಿ ಕೆಲಸ ಮಾಡಲಿ ಜೊತೆಗೆ ಕಾರ್ಯಾಂಗ ಶಾಸಕಾಂಗ ಒಟ್ಟಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರಿಗೆ ಐದು ವರ್ಷದಿಂದ ಕಾದಿದ್ದ ಕತ್ತಲು ಇವತ್ತು ಬೆಳಕಾಗಿದೆ ಎಂಎಲ್ಎ ಕೊತ್ತೂರು ಮಂಜುನಾಥ್, ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡವಾಗಿ ಕೆಲಸ ಮಾಡಿದ್ದಕ್ಕೆ ನೌಕರರ ಜಯವಾಗಿದೆ ಮುಂದೆ ಆಡಳಿತದೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಮಾದರಿ ಜಿಲ್ಲೆ ಮಾಡೋಣ ಎಂದರು.
ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಇವತ್ತಿನ ಗೆಲುವಿನೊಂದಿಗೆ ಜವಾಬ್ದಾರಿ ಹೆಚ್ಚಿದೆ ಹಿಂದೆ ಐದು ವರ್ಷದಲ್ಲಿ ಸರಿಯಾಗಿ ಸಭೆಗಳು ನಡೆದಿಲ್ಲ ಮುಂದೆ ಹಾಗೇ ನಡೆಯದ ರೀತಿಯಲ್ಲಿ ಶಾಸಕಾಂಗ ಕಾರ್ಯಾಂಗದ ಜೊತೆಗೆ ಹೋಗೋಣ ನೌಕರ ಭವನಕ್ಕೆ ಮೊದಲ ಸಭೆಯಲ್ಲಿ ತೀರ್ಮಾನ ಮಾಡೋಣ ಜೊತೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಹಂತ ಹಂತವಾಗಿ ಹೋಗೋಣ ಎಂದರು.
ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿ ಮುರಳಿ ಮೋಹನ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಪದಾಧಿಕಾರಿಗಳಾದ, ಎಸ್. ಚೌಡಪ್ಪ, ವಿಜಯ್, ಕೆ.ಟಿ ನಾಗರಾಜ್ ಅಪ್ಪೇಗೌಡ, ಶಿವಕುಮಾರ್, ಎಂ ನಾಗರಾಜ್, ಅನಿಲ್ ಕುಮಾರ್, ಶ್ರೀರಾಮ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…