Categories: ಕೋಲಾರ

ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಂದ ಎಂಎಲ್ಸಿ ಅನಿಲ್ ಕುಮಾರ್ ಗೆ ಸನ್ಮಾನ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ವಂದಿಸುವುದು ನೌಕರರ ಹಿತ ಕಾಪಾಡಲು ನೂತನ ಸಮಿತಿ ಕೆಲಸ ಮಾಡಲಿ ಜೊತೆಗೆ ಕಾರ್ಯಾಂಗ ಶಾಸಕಾಂಗ ಒಟ್ಟಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರಿಗೆ ಐದು ವರ್ಷದಿಂದ ಕಾದಿದ್ದ ಕತ್ತಲು ಇವತ್ತು ಬೆಳಕಾಗಿದೆ ಎಂಎಲ್ಎ ಕೊತ್ತೂರು ಮಂಜುನಾಥ್, ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡವಾಗಿ ಕೆಲಸ ಮಾಡಿದ್ದಕ್ಕೆ ನೌಕರರ ಜಯವಾಗಿದೆ ಮುಂದೆ ಆಡಳಿತದೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಮಾದರಿ ಜಿಲ್ಲೆ ಮಾಡೋಣ ಎಂದರು.

ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಇವತ್ತಿನ ಗೆಲುವಿನೊಂದಿಗೆ ಜವಾಬ್ದಾರಿ ಹೆಚ್ಚಿದೆ ಹಿಂದೆ ಐದು ವರ್ಷದಲ್ಲಿ ಸರಿಯಾಗಿ ಸಭೆಗಳು ನಡೆದಿಲ್ಲ ಮುಂದೆ ಹಾಗೇ ನಡೆಯದ ರೀತಿಯಲ್ಲಿ ಶಾಸಕಾಂಗ ಕಾರ್ಯಾಂಗದ ಜೊತೆಗೆ ಹೋಗೋಣ ನೌಕರ ಭವನಕ್ಕೆ ಮೊದಲ ಸಭೆಯಲ್ಲಿ ತೀರ್ಮಾನ ಮಾಡೋಣ ಜೊತೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಹಂತ ಹಂತವಾಗಿ ಹೋಗೋಣ ಎಂದರು.

ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿ ಮುರಳಿ ಮೋಹನ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಪದಾಧಿಕಾರಿಗಳಾದ, ಎಸ್. ಚೌಡಪ್ಪ, ವಿಜಯ್, ಕೆ.ಟಿ ನಾಗರಾಜ್ ಅಪ್ಪೇಗೌಡ, ಶಿವಕುಮಾರ್, ಎಂ ನಾಗರಾಜ್, ಅನಿಲ್ ಕುಮಾರ್, ಶ್ರೀರಾಮ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಮುಂತಾದವರು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

12 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

13 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

19 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago