Categories: ಕೋಲಾರ

ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಂದ ಎಂಎಲ್ಸಿ ಅನಿಲ್ ಕುಮಾರ್ ಗೆ ಸನ್ಮಾನ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ವಂದಿಸುವುದು ನೌಕರರ ಹಿತ ಕಾಪಾಡಲು ನೂತನ ಸಮಿತಿ ಕೆಲಸ ಮಾಡಲಿ ಜೊತೆಗೆ ಕಾರ್ಯಾಂಗ ಶಾಸಕಾಂಗ ಒಟ್ಟಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರಿಗೆ ಐದು ವರ್ಷದಿಂದ ಕಾದಿದ್ದ ಕತ್ತಲು ಇವತ್ತು ಬೆಳಕಾಗಿದೆ ಎಂಎಲ್ಎ ಕೊತ್ತೂರು ಮಂಜುನಾಥ್, ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡವಾಗಿ ಕೆಲಸ ಮಾಡಿದ್ದಕ್ಕೆ ನೌಕರರ ಜಯವಾಗಿದೆ ಮುಂದೆ ಆಡಳಿತದೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಮಾದರಿ ಜಿಲ್ಲೆ ಮಾಡೋಣ ಎಂದರು.

ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಇವತ್ತಿನ ಗೆಲುವಿನೊಂದಿಗೆ ಜವಾಬ್ದಾರಿ ಹೆಚ್ಚಿದೆ ಹಿಂದೆ ಐದು ವರ್ಷದಲ್ಲಿ ಸರಿಯಾಗಿ ಸಭೆಗಳು ನಡೆದಿಲ್ಲ ಮುಂದೆ ಹಾಗೇ ನಡೆಯದ ರೀತಿಯಲ್ಲಿ ಶಾಸಕಾಂಗ ಕಾರ್ಯಾಂಗದ ಜೊತೆಗೆ ಹೋಗೋಣ ನೌಕರ ಭವನಕ್ಕೆ ಮೊದಲ ಸಭೆಯಲ್ಲಿ ತೀರ್ಮಾನ ಮಾಡೋಣ ಜೊತೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಹಂತ ಹಂತವಾಗಿ ಹೋಗೋಣ ಎಂದರು.

ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿ ಮುರಳಿ ಮೋಹನ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಪದಾಧಿಕಾರಿಗಳಾದ, ಎಸ್. ಚೌಡಪ್ಪ, ವಿಜಯ್, ಕೆ.ಟಿ ನಾಗರಾಜ್ ಅಪ್ಪೇಗೌಡ, ಶಿವಕುಮಾರ್, ಎಂ ನಾಗರಾಜ್, ಅನಿಲ್ ಕುಮಾರ್, ಶ್ರೀರಾಮ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಮುಂತಾದವರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

10 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago