ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಲಹೆ ನೀಡಿದರು.
ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಅಡ್ಡಗಲ್ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸರ್ಕಾರಿ ನೌಕರರ ಸಂಘದ ಅಭಿನಂದನೆಗಳನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಜನ ಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸುವಂತೆ ಕರೆ ನೀಡಿದರು.
ನೂತನ ಸಂಘದ ಪದಾಧಿಕಾರಿಗಳು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಸಂಘದ ಅಭಿವೃದ್ದಿಯ ಜೊತೆಗೆ ಐದು ವರ್ಷಗಳ ಕಾಲ ಸಂಘವನ್ನ ಒಗ್ಗಟ್ಟಿನಿಂದ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಸರ್ಕಾರಿ ನೌಕರರ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸುವ ಭರವಸೆಯನ್ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂತನ ಪದಾಧಿಕಾರಿಗಳಿಗೆ ವಾಗ್ದಾನ ಮಾಡಿದರು.
ನೂತನ ಅಧ್ಯಕ್ಷ ಅಜಯ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ನಿರ್ದೇಶಕರಾದ ಕೆ.ಎನ್ ಮಂಜುನಾಥ್, ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…