ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಲಹೆ ನೀಡಿದರು.
ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಅಡ್ಡಗಲ್ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸರ್ಕಾರಿ ನೌಕರರ ಸಂಘದ ಅಭಿನಂದನೆಗಳನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಜನ ಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸುವಂತೆ ಕರೆ ನೀಡಿದರು.
ನೂತನ ಸಂಘದ ಪದಾಧಿಕಾರಿಗಳು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಸಂಘದ ಅಭಿವೃದ್ದಿಯ ಜೊತೆಗೆ ಐದು ವರ್ಷಗಳ ಕಾಲ ಸಂಘವನ್ನ ಒಗ್ಗಟ್ಟಿನಿಂದ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಸರ್ಕಾರಿ ನೌಕರರ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸುವ ಭರವಸೆಯನ್ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂತನ ಪದಾಧಿಕಾರಿಗಳಿಗೆ ವಾಗ್ದಾನ ಮಾಡಿದರು.
ನೂತನ ಅಧ್ಯಕ್ಷ ಅಜಯ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ನಿರ್ದೇಶಕರಾದ ಕೆ.ಎನ್ ಮಂಜುನಾಥ್, ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…