ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಲಹೆ ನೀಡಿದರು.
ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಅಡ್ಡಗಲ್ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸರ್ಕಾರಿ ನೌಕರರ ಸಂಘದ ಅಭಿನಂದನೆಗಳನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಜನ ಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸುವಂತೆ ಕರೆ ನೀಡಿದರು.
ನೂತನ ಸಂಘದ ಪದಾಧಿಕಾರಿಗಳು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಸಂಘದ ಅಭಿವೃದ್ದಿಯ ಜೊತೆಗೆ ಐದು ವರ್ಷಗಳ ಕಾಲ ಸಂಘವನ್ನ ಒಗ್ಗಟ್ಟಿನಿಂದ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಸರ್ಕಾರಿ ನೌಕರರ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸುವ ಭರವಸೆಯನ್ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂತನ ಪದಾಧಿಕಾರಿಗಳಿಗೆ ವಾಗ್ದಾನ ಮಾಡಿದರು.
ನೂತನ ಅಧ್ಯಕ್ಷ ಅಜಯ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ನಿರ್ದೇಶಕರಾದ ಕೆ.ಎನ್ ಮಂಜುನಾಥ್, ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…