ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಲಹೆ ನೀಡಿದರು.
ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಅಡ್ಡಗಲ್ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸರ್ಕಾರಿ ನೌಕರರ ಸಂಘದ ಅಭಿನಂದನೆಗಳನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಜನ ಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸುವಂತೆ ಕರೆ ನೀಡಿದರು.
ನೂತನ ಸಂಘದ ಪದಾಧಿಕಾರಿಗಳು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಸಂಘದ ಅಭಿವೃದ್ದಿಯ ಜೊತೆಗೆ ಐದು ವರ್ಷಗಳ ಕಾಲ ಸಂಘವನ್ನ ಒಗ್ಗಟ್ಟಿನಿಂದ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಸರ್ಕಾರಿ ನೌಕರರ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸುವ ಭರವಸೆಯನ್ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂತನ ಪದಾಧಿಕಾರಿಗಳಿಗೆ ವಾಗ್ದಾನ ಮಾಡಿದರು.
ನೂತನ ಅಧ್ಯಕ್ಷ ಅಜಯ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ನಿರ್ದೇಶಕರಾದ ಕೆ.ಎನ್ ಮಂಜುನಾಥ್, ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ ಮತ್ತಿತರರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…