Categories: ಕೋಲಾರ

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಸಂಸದ ಮಲ್ಲೇಶ್ ಬಾಬುಗೆ ಅಭಿನಂದನೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರವಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರತಿಯೊಂದು ಮನೆ ಬಾಗಿಲಿಗೆ ಮುಟ್ಟಿಸುವುದು ಕೆಲಸವನ್ನು ಅಧಿಕಾರಿ ವರ್ಗ ಮಾಡಿಕೊಂಡು ಬಂದಿದ್ದಾರೆ ಸರ್ಕಾರದ ಉದ್ದೇಶಕ್ಕೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ನೂತನವಾಗಿ ಆಯ್ಕೆಯಾಗಿರುವ ಸಮಿತಿಯು ನೌಕರಿ ಸ್ನೇಹಿಯಾಗಿ ಮುಂದಿನ ಐದು ವರ್ಷಗಳ ಕಾಲ ಕೆಲಸ ಮಾಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ ಜಿಲ್ಲೆಯ ಸರ್ಕಾರಿ ನೌಕರರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಸಂಘವನ್ನು ನೌಕರರ ಸ್ನೇಹಿಯಾಗಿ ರೂಪಿಸಲಾಗುವುದು ಜಿಲ್ಲಾಕೇಂದ್ರದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಸುಸಜ್ಜಿತ ನೌಕರರ ಭವನ ನಿರ್ಮಾಣ ಮಾಡಿ ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ ರೂಪಿಸಲಾಗುವುದು ಇದಕ್ಕೆ ತಮ್ಮಗಳ ಸಹಕಾರವು ಅತಿ ಮುಖ್ಯವಾಗಿದ್ದು ಸಹಕರಿಸುವಂತೆ ಮನವಿ ಮಾಡಿದರು.

ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪದಾಧಿಕಾರಿಗಳಾದ ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ, ರಂಜಿತ್, ವರದರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago