Categories: ಕೋಲಾರ

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಸಂಸದ ಮಲ್ಲೇಶ್ ಬಾಬುಗೆ ಅಭಿನಂದನೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರವಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರತಿಯೊಂದು ಮನೆ ಬಾಗಿಲಿಗೆ ಮುಟ್ಟಿಸುವುದು ಕೆಲಸವನ್ನು ಅಧಿಕಾರಿ ವರ್ಗ ಮಾಡಿಕೊಂಡು ಬಂದಿದ್ದಾರೆ ಸರ್ಕಾರದ ಉದ್ದೇಶಕ್ಕೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ನೂತನವಾಗಿ ಆಯ್ಕೆಯಾಗಿರುವ ಸಮಿತಿಯು ನೌಕರಿ ಸ್ನೇಹಿಯಾಗಿ ಮುಂದಿನ ಐದು ವರ್ಷಗಳ ಕಾಲ ಕೆಲಸ ಮಾಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ ಜಿಲ್ಲೆಯ ಸರ್ಕಾರಿ ನೌಕರರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಸಂಘವನ್ನು ನೌಕರರ ಸ್ನೇಹಿಯಾಗಿ ರೂಪಿಸಲಾಗುವುದು ಜಿಲ್ಲಾಕೇಂದ್ರದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಸುಸಜ್ಜಿತ ನೌಕರರ ಭವನ ನಿರ್ಮಾಣ ಮಾಡಿ ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ ರೂಪಿಸಲಾಗುವುದು ಇದಕ್ಕೆ ತಮ್ಮಗಳ ಸಹಕಾರವು ಅತಿ ಮುಖ್ಯವಾಗಿದ್ದು ಸಹಕರಿಸುವಂತೆ ಮನವಿ ಮಾಡಿದರು.

ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪದಾಧಿಕಾರಿಗಳಾದ ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ, ರಂಜಿತ್, ವರದರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

12 minutes ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

3 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

8 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

8 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago