Categories: ಕೋಲಾರ

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಸಂಸದ ಮಲ್ಲೇಶ್ ಬಾಬುಗೆ ಅಭಿನಂದನೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರವಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರತಿಯೊಂದು ಮನೆ ಬಾಗಿಲಿಗೆ ಮುಟ್ಟಿಸುವುದು ಕೆಲಸವನ್ನು ಅಧಿಕಾರಿ ವರ್ಗ ಮಾಡಿಕೊಂಡು ಬಂದಿದ್ದಾರೆ ಸರ್ಕಾರದ ಉದ್ದೇಶಕ್ಕೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ನೂತನವಾಗಿ ಆಯ್ಕೆಯಾಗಿರುವ ಸಮಿತಿಯು ನೌಕರಿ ಸ್ನೇಹಿಯಾಗಿ ಮುಂದಿನ ಐದು ವರ್ಷಗಳ ಕಾಲ ಕೆಲಸ ಮಾಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ ಜಿಲ್ಲೆಯ ಸರ್ಕಾರಿ ನೌಕರರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಸಂಘವನ್ನು ನೌಕರರ ಸ್ನೇಹಿಯಾಗಿ ರೂಪಿಸಲಾಗುವುದು ಜಿಲ್ಲಾಕೇಂದ್ರದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಸುಸಜ್ಜಿತ ನೌಕರರ ಭವನ ನಿರ್ಮಾಣ ಮಾಡಿ ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ ರೂಪಿಸಲಾಗುವುದು ಇದಕ್ಕೆ ತಮ್ಮಗಳ ಸಹಕಾರವು ಅತಿ ಮುಖ್ಯವಾಗಿದ್ದು ಸಹಕರಿಸುವಂತೆ ಮನವಿ ಮಾಡಿದರು.

ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪದಾಧಿಕಾರಿಗಳಾದ ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ, ರಂಜಿತ್, ವರದರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

9 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago