Categories: ಕೋಲಾರ

ಸರ್ಕಾರಿ ನೌಕರರ ಸಂಘದ ಹೆಸರಲ್ಲಿ ಭ್ರಷ್ಟಾಚಾರ ಆರೋಪ: ಕ್ರಮಕ್ಕೆ ರೈತ ಸಂಘದಿಂದ ಡಿಸಿಗೆ ಮನವಿ

ಕೋಲಾರ: ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾರ್ಟ್, ಪ್ರವಾಸ, ಮೋಜು, ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಬೇಕಾದ ನೌಕರರೇ ಹಾದಿ ತಪ್ಪಿದರೆ ಇನ್ನೂ ಜನಸಾಮಾನ್ಯರಿಗೆ ನ್ಯಾಯ ಒದಗಿಸುವವರೇ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದಕ್ಕೆ ನೌಕರರ ಸಂಘದ ಚುನಾವಣೆಯಲ್ಲಿ ಹರಿದಾಡುತ್ತಿರುವ ಹಣ,ಆಮಿಷಗಳೇ ಸಾಕ್ಷಿಯಾಗಿದೆ, ಸರ್ಕಾರಿ ನೌಕರರು ಕೇವಲ ಸಂಬಳ ಪಡೆಯುವುದು ಮಾತ್ರವಾದರೆ ಇಷ್ಟೊಂದು ಲಕ್ಷಲಕ್ಷ ಹಣ ಎಲ್ಲಿಂದ ತಂದು ಚುನಾವಣೆಯಲ್ಲಿ ಹಂಚಲು ಸಿದ್ದರಾಗಿದ್ದಾರೆ ಎಂಬುದರ ಕುರಿತು ಜಿಲ್ಲಾಧಿಕಾರಿಗಳು ತನಿಖೆಗೆ ಆಗ್ರಹಿಸಬೇಕು, ಲೋಕಾಯುಕ್ತರು ಇಂತಹ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು,ಆಮಿಷವೊಡ್ಡುವ ನೌಕರರ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ, ನೌಕರರ ಸಂಘ ಚುನವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನೌಕರರ ಅಭಿವೃದ್ದಿ, ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಬೇಕೇ ಹೊರತು ರಾಜಕೀಯ ವ್ಯಕ್ತಿಗಳ ಜೊತೆ ಸೇರಿಕೊಂಡು ಆ ಪಕ್ಷ ಈ ಪಕ್ಷ ಎಂದು ಚುನಾವಣೆಯನ್ನು ದಿಕ್ಕು ತಪ್ಪಿಸಿ ಮತ ಚಲಾಯಿಸುವ ನೌಕರರಿಗೆ ದ್ವಿಚಕ್ರವಾಹನ, ಚಿನ್ನದ ನಾಣ್ಯ ಮತ್ತಿತರ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿವೆ, ಇದು ನಿಜವೇ ಆಗಿದ್ದಲ್ಲಿ ಅದನ್ನು ಪತ್ತೆಹಚ್ಚಿ ಇದನ್ನು ನೀಡುವ ಭ್ರಷ್ಟ ಕುಳಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಡಿ.4 ರಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ನಿಗಧಿಯಾಗಿರುವುದು ಸರಿಯಷ್ಟೆ. ಆದರೆ ಚುನಾವಣೆಗೆ ಮುನ್ನಾ ಅಭ್ಯರ್ಥಿಗಳು ನೌಕರರ ಸಂಘದ ನಿರ್ದೇಶಕರಿಗೆ ಹಣ,ಆಮಿಷವೊಡ್ಡಿ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿರುವ ಜೊತೆಗೆ ಕೋಟಿ ಕೋಟಿ ಹಣ ಸುರಿಯುತ್ತಿರುವ ನೌಕರ ಸಂಘದ ಆಭ್ಯರ್ಥಿಗಳಿಗೆ ಹಣದ ಮೂಲ ಯಾವುದು ಜನ ಸಾಮಾನ್ಯರನ್ನು ಹಿಂಸಿಸಿ ಹಣ ಮಾಡಿ ಚುನಾವಣೆಗೆ ಸುರಿಯುತ್ತಿದ್ದಾರೆಯೇ ಇಲ್ಲವೇ ರಾಜಕಾರಣಿಗಳು ಅಧಿಕಾರಿಗಳನ್ನು ತಮ್ಮ ಹಿಡಿತಕ್ಕೆ ಪಡೆದು ಗೆದ್ದ ನಂತರ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಬಂಡವಾಳ ಸುರಿಯುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದರು.

ಚುನಾವಣೆ ಡಿ.4 ರಂದು ನಡೆಯಲಿದ್ದು, ಅಂದುಹೋಗಿ ನೌಕರರ ಸಂಘದ ನಿರ್ದೇಶಕರಾಗಿರುವವರು ತಮ್ಮ ಹಕ್ಕು ಚಲಾಯಿಸಿ ನಂತರ ತಮ್ಮ ಇಲಾಖೆಯಲ್ಲಿನ ಜನಸೇವೆಯ ಕರ್ತವ್ಯ ಮುಂದುವರೆಸಲಿ ಅದು ಬಿಟ್ಟು ಮೂರು ದಿನಗಳ ಮೊದಲೇ ರೆಸಾರ್ಟ್,ಪ್ರವಾಸಕ್ಕೆ ಕರೆದುಕೊಂಡು ಹೋಗಿ ಮೋಜು,ಮಸ್ತಿ ಮಾಡುವ ಮೂಲಕ ರಾಜಕೀಯ ಪಕ್ಷಗಳಿಗಿಂತ ನಾವು ಏನೂ ಕಡಿಮೆ ಇಲ್ಲ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಮನವಿ ನೀಡುವಾಗ ಸಂಘಟನೆತ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ತಾ.ಅ ಮೂರಾಂಡಹಳ್ಳಿ ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನ ಸೌಭಾಗ್ಯ ಮುಂತಾದವರಿದ್ದರು.

Ramesh Babu

Journalist

Recent Posts

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

1 hour ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

17 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

17 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

19 hours ago