Categories: ಕೋಲಾರ

ಸರ್ಕಾರಿ ನೌಕರರ ಸಂಘದ ಹೆಸರಲ್ಲಿ ಭ್ರಷ್ಟಾಚಾರ ಆರೋಪ: ಕ್ರಮಕ್ಕೆ ರೈತ ಸಂಘದಿಂದ ಡಿಸಿಗೆ ಮನವಿ

ಕೋಲಾರ: ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾರ್ಟ್, ಪ್ರವಾಸ, ಮೋಜು, ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಬೇಕಾದ ನೌಕರರೇ ಹಾದಿ ತಪ್ಪಿದರೆ ಇನ್ನೂ ಜನಸಾಮಾನ್ಯರಿಗೆ ನ್ಯಾಯ ಒದಗಿಸುವವರೇ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದಕ್ಕೆ ನೌಕರರ ಸಂಘದ ಚುನಾವಣೆಯಲ್ಲಿ ಹರಿದಾಡುತ್ತಿರುವ ಹಣ,ಆಮಿಷಗಳೇ ಸಾಕ್ಷಿಯಾಗಿದೆ, ಸರ್ಕಾರಿ ನೌಕರರು ಕೇವಲ ಸಂಬಳ ಪಡೆಯುವುದು ಮಾತ್ರವಾದರೆ ಇಷ್ಟೊಂದು ಲಕ್ಷಲಕ್ಷ ಹಣ ಎಲ್ಲಿಂದ ತಂದು ಚುನಾವಣೆಯಲ್ಲಿ ಹಂಚಲು ಸಿದ್ದರಾಗಿದ್ದಾರೆ ಎಂಬುದರ ಕುರಿತು ಜಿಲ್ಲಾಧಿಕಾರಿಗಳು ತನಿಖೆಗೆ ಆಗ್ರಹಿಸಬೇಕು, ಲೋಕಾಯುಕ್ತರು ಇಂತಹ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು,ಆಮಿಷವೊಡ್ಡುವ ನೌಕರರ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ, ನೌಕರರ ಸಂಘ ಚುನವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನೌಕರರ ಅಭಿವೃದ್ದಿ, ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಬೇಕೇ ಹೊರತು ರಾಜಕೀಯ ವ್ಯಕ್ತಿಗಳ ಜೊತೆ ಸೇರಿಕೊಂಡು ಆ ಪಕ್ಷ ಈ ಪಕ್ಷ ಎಂದು ಚುನಾವಣೆಯನ್ನು ದಿಕ್ಕು ತಪ್ಪಿಸಿ ಮತ ಚಲಾಯಿಸುವ ನೌಕರರಿಗೆ ದ್ವಿಚಕ್ರವಾಹನ, ಚಿನ್ನದ ನಾಣ್ಯ ಮತ್ತಿತರ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿವೆ, ಇದು ನಿಜವೇ ಆಗಿದ್ದಲ್ಲಿ ಅದನ್ನು ಪತ್ತೆಹಚ್ಚಿ ಇದನ್ನು ನೀಡುವ ಭ್ರಷ್ಟ ಕುಳಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಡಿ.4 ರಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ನಿಗಧಿಯಾಗಿರುವುದು ಸರಿಯಷ್ಟೆ. ಆದರೆ ಚುನಾವಣೆಗೆ ಮುನ್ನಾ ಅಭ್ಯರ್ಥಿಗಳು ನೌಕರರ ಸಂಘದ ನಿರ್ದೇಶಕರಿಗೆ ಹಣ,ಆಮಿಷವೊಡ್ಡಿ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿರುವ ಜೊತೆಗೆ ಕೋಟಿ ಕೋಟಿ ಹಣ ಸುರಿಯುತ್ತಿರುವ ನೌಕರ ಸಂಘದ ಆಭ್ಯರ್ಥಿಗಳಿಗೆ ಹಣದ ಮೂಲ ಯಾವುದು ಜನ ಸಾಮಾನ್ಯರನ್ನು ಹಿಂಸಿಸಿ ಹಣ ಮಾಡಿ ಚುನಾವಣೆಗೆ ಸುರಿಯುತ್ತಿದ್ದಾರೆಯೇ ಇಲ್ಲವೇ ರಾಜಕಾರಣಿಗಳು ಅಧಿಕಾರಿಗಳನ್ನು ತಮ್ಮ ಹಿಡಿತಕ್ಕೆ ಪಡೆದು ಗೆದ್ದ ನಂತರ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಬಂಡವಾಳ ಸುರಿಯುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದರು.

ಚುನಾವಣೆ ಡಿ.4 ರಂದು ನಡೆಯಲಿದ್ದು, ಅಂದುಹೋಗಿ ನೌಕರರ ಸಂಘದ ನಿರ್ದೇಶಕರಾಗಿರುವವರು ತಮ್ಮ ಹಕ್ಕು ಚಲಾಯಿಸಿ ನಂತರ ತಮ್ಮ ಇಲಾಖೆಯಲ್ಲಿನ ಜನಸೇವೆಯ ಕರ್ತವ್ಯ ಮುಂದುವರೆಸಲಿ ಅದು ಬಿಟ್ಟು ಮೂರು ದಿನಗಳ ಮೊದಲೇ ರೆಸಾರ್ಟ್,ಪ್ರವಾಸಕ್ಕೆ ಕರೆದುಕೊಂಡು ಹೋಗಿ ಮೋಜು,ಮಸ್ತಿ ಮಾಡುವ ಮೂಲಕ ರಾಜಕೀಯ ಪಕ್ಷಗಳಿಗಿಂತ ನಾವು ಏನೂ ಕಡಿಮೆ ಇಲ್ಲ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಮನವಿ ನೀಡುವಾಗ ಸಂಘಟನೆತ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ತಾ.ಅ ಮೂರಾಂಡಹಳ್ಳಿ ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನ ಸೌಭಾಗ್ಯ ಮುಂತಾದವರಿದ್ದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago