Categories: ಕೋಲಾರ

ಸರ್ಕಾರಿ ನೌಕರರ ಸಂಘದ ಹೆಸರಲ್ಲಿ ಭ್ರಷ್ಟಾಚಾರ ಆರೋಪ: ಕ್ರಮಕ್ಕೆ ರೈತ ಸಂಘದಿಂದ ಡಿಸಿಗೆ ಮನವಿ

ಕೋಲಾರ: ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾರ್ಟ್, ಪ್ರವಾಸ, ಮೋಜು, ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಬೇಕಾದ ನೌಕರರೇ ಹಾದಿ ತಪ್ಪಿದರೆ ಇನ್ನೂ ಜನಸಾಮಾನ್ಯರಿಗೆ ನ್ಯಾಯ ಒದಗಿಸುವವರೇ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದಕ್ಕೆ ನೌಕರರ ಸಂಘದ ಚುನಾವಣೆಯಲ್ಲಿ ಹರಿದಾಡುತ್ತಿರುವ ಹಣ,ಆಮಿಷಗಳೇ ಸಾಕ್ಷಿಯಾಗಿದೆ, ಸರ್ಕಾರಿ ನೌಕರರು ಕೇವಲ ಸಂಬಳ ಪಡೆಯುವುದು ಮಾತ್ರವಾದರೆ ಇಷ್ಟೊಂದು ಲಕ್ಷಲಕ್ಷ ಹಣ ಎಲ್ಲಿಂದ ತಂದು ಚುನಾವಣೆಯಲ್ಲಿ ಹಂಚಲು ಸಿದ್ದರಾಗಿದ್ದಾರೆ ಎಂಬುದರ ಕುರಿತು ಜಿಲ್ಲಾಧಿಕಾರಿಗಳು ತನಿಖೆಗೆ ಆಗ್ರಹಿಸಬೇಕು, ಲೋಕಾಯುಕ್ತರು ಇಂತಹ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು,ಆಮಿಷವೊಡ್ಡುವ ನೌಕರರ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ, ನೌಕರರ ಸಂಘ ಚುನವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನೌಕರರ ಅಭಿವೃದ್ದಿ, ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಬೇಕೇ ಹೊರತು ರಾಜಕೀಯ ವ್ಯಕ್ತಿಗಳ ಜೊತೆ ಸೇರಿಕೊಂಡು ಆ ಪಕ್ಷ ಈ ಪಕ್ಷ ಎಂದು ಚುನಾವಣೆಯನ್ನು ದಿಕ್ಕು ತಪ್ಪಿಸಿ ಮತ ಚಲಾಯಿಸುವ ನೌಕರರಿಗೆ ದ್ವಿಚಕ್ರವಾಹನ, ಚಿನ್ನದ ನಾಣ್ಯ ಮತ್ತಿತರ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿವೆ, ಇದು ನಿಜವೇ ಆಗಿದ್ದಲ್ಲಿ ಅದನ್ನು ಪತ್ತೆಹಚ್ಚಿ ಇದನ್ನು ನೀಡುವ ಭ್ರಷ್ಟ ಕುಳಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಡಿ.4 ರಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ನಿಗಧಿಯಾಗಿರುವುದು ಸರಿಯಷ್ಟೆ. ಆದರೆ ಚುನಾವಣೆಗೆ ಮುನ್ನಾ ಅಭ್ಯರ್ಥಿಗಳು ನೌಕರರ ಸಂಘದ ನಿರ್ದೇಶಕರಿಗೆ ಹಣ,ಆಮಿಷವೊಡ್ಡಿ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿರುವ ಜೊತೆಗೆ ಕೋಟಿ ಕೋಟಿ ಹಣ ಸುರಿಯುತ್ತಿರುವ ನೌಕರ ಸಂಘದ ಆಭ್ಯರ್ಥಿಗಳಿಗೆ ಹಣದ ಮೂಲ ಯಾವುದು ಜನ ಸಾಮಾನ್ಯರನ್ನು ಹಿಂಸಿಸಿ ಹಣ ಮಾಡಿ ಚುನಾವಣೆಗೆ ಸುರಿಯುತ್ತಿದ್ದಾರೆಯೇ ಇಲ್ಲವೇ ರಾಜಕಾರಣಿಗಳು ಅಧಿಕಾರಿಗಳನ್ನು ತಮ್ಮ ಹಿಡಿತಕ್ಕೆ ಪಡೆದು ಗೆದ್ದ ನಂತರ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಬಂಡವಾಳ ಸುರಿಯುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದರು.

ಚುನಾವಣೆ ಡಿ.4 ರಂದು ನಡೆಯಲಿದ್ದು, ಅಂದುಹೋಗಿ ನೌಕರರ ಸಂಘದ ನಿರ್ದೇಶಕರಾಗಿರುವವರು ತಮ್ಮ ಹಕ್ಕು ಚಲಾಯಿಸಿ ನಂತರ ತಮ್ಮ ಇಲಾಖೆಯಲ್ಲಿನ ಜನಸೇವೆಯ ಕರ್ತವ್ಯ ಮುಂದುವರೆಸಲಿ ಅದು ಬಿಟ್ಟು ಮೂರು ದಿನಗಳ ಮೊದಲೇ ರೆಸಾರ್ಟ್,ಪ್ರವಾಸಕ್ಕೆ ಕರೆದುಕೊಂಡು ಹೋಗಿ ಮೋಜು,ಮಸ್ತಿ ಮಾಡುವ ಮೂಲಕ ರಾಜಕೀಯ ಪಕ್ಷಗಳಿಗಿಂತ ನಾವು ಏನೂ ಕಡಿಮೆ ಇಲ್ಲ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಮನವಿ ನೀಡುವಾಗ ಸಂಘಟನೆತ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ತಾ.ಅ ಮೂರಾಂಡಹಳ್ಳಿ ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನ ಸೌಭಾಗ್ಯ ಮುಂತಾದವರಿದ್ದರು.

Ramesh Babu

Journalist

Recent Posts

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

6 minutes ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

3 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

6 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

12 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

1 day ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

2 days ago