Categories: ಕೋಲಾರ

ಸರ್ಕಾರಿ ನೌಕರರ ಸಂಘದ ಹೆಸರಲ್ಲಿ ಭ್ರಷ್ಟಾಚಾರ ಆರೋಪ: ಕ್ರಮಕ್ಕೆ ರೈತ ಸಂಘದಿಂದ ಡಿಸಿಗೆ ಮನವಿ

ಕೋಲಾರ: ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾರ್ಟ್, ಪ್ರವಾಸ, ಮೋಜು, ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಬೇಕಾದ ನೌಕರರೇ ಹಾದಿ ತಪ್ಪಿದರೆ ಇನ್ನೂ ಜನಸಾಮಾನ್ಯರಿಗೆ ನ್ಯಾಯ ಒದಗಿಸುವವರೇ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದಕ್ಕೆ ನೌಕರರ ಸಂಘದ ಚುನಾವಣೆಯಲ್ಲಿ ಹರಿದಾಡುತ್ತಿರುವ ಹಣ,ಆಮಿಷಗಳೇ ಸಾಕ್ಷಿಯಾಗಿದೆ, ಸರ್ಕಾರಿ ನೌಕರರು ಕೇವಲ ಸಂಬಳ ಪಡೆಯುವುದು ಮಾತ್ರವಾದರೆ ಇಷ್ಟೊಂದು ಲಕ್ಷಲಕ್ಷ ಹಣ ಎಲ್ಲಿಂದ ತಂದು ಚುನಾವಣೆಯಲ್ಲಿ ಹಂಚಲು ಸಿದ್ದರಾಗಿದ್ದಾರೆ ಎಂಬುದರ ಕುರಿತು ಜಿಲ್ಲಾಧಿಕಾರಿಗಳು ತನಿಖೆಗೆ ಆಗ್ರಹಿಸಬೇಕು, ಲೋಕಾಯುಕ್ತರು ಇಂತಹ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು,ಆಮಿಷವೊಡ್ಡುವ ನೌಕರರ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ, ನೌಕರರ ಸಂಘ ಚುನವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನೌಕರರ ಅಭಿವೃದ್ದಿ, ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಬೇಕೇ ಹೊರತು ರಾಜಕೀಯ ವ್ಯಕ್ತಿಗಳ ಜೊತೆ ಸೇರಿಕೊಂಡು ಆ ಪಕ್ಷ ಈ ಪಕ್ಷ ಎಂದು ಚುನಾವಣೆಯನ್ನು ದಿಕ್ಕು ತಪ್ಪಿಸಿ ಮತ ಚಲಾಯಿಸುವ ನೌಕರರಿಗೆ ದ್ವಿಚಕ್ರವಾಹನ, ಚಿನ್ನದ ನಾಣ್ಯ ಮತ್ತಿತರ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿವೆ, ಇದು ನಿಜವೇ ಆಗಿದ್ದಲ್ಲಿ ಅದನ್ನು ಪತ್ತೆಹಚ್ಚಿ ಇದನ್ನು ನೀಡುವ ಭ್ರಷ್ಟ ಕುಳಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಡಿ.4 ರಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ನಿಗಧಿಯಾಗಿರುವುದು ಸರಿಯಷ್ಟೆ. ಆದರೆ ಚುನಾವಣೆಗೆ ಮುನ್ನಾ ಅಭ್ಯರ್ಥಿಗಳು ನೌಕರರ ಸಂಘದ ನಿರ್ದೇಶಕರಿಗೆ ಹಣ,ಆಮಿಷವೊಡ್ಡಿ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿರುವ ಜೊತೆಗೆ ಕೋಟಿ ಕೋಟಿ ಹಣ ಸುರಿಯುತ್ತಿರುವ ನೌಕರ ಸಂಘದ ಆಭ್ಯರ್ಥಿಗಳಿಗೆ ಹಣದ ಮೂಲ ಯಾವುದು ಜನ ಸಾಮಾನ್ಯರನ್ನು ಹಿಂಸಿಸಿ ಹಣ ಮಾಡಿ ಚುನಾವಣೆಗೆ ಸುರಿಯುತ್ತಿದ್ದಾರೆಯೇ ಇಲ್ಲವೇ ರಾಜಕಾರಣಿಗಳು ಅಧಿಕಾರಿಗಳನ್ನು ತಮ್ಮ ಹಿಡಿತಕ್ಕೆ ಪಡೆದು ಗೆದ್ದ ನಂತರ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಬಂಡವಾಳ ಸುರಿಯುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದರು.

ಚುನಾವಣೆ ಡಿ.4 ರಂದು ನಡೆಯಲಿದ್ದು, ಅಂದುಹೋಗಿ ನೌಕರರ ಸಂಘದ ನಿರ್ದೇಶಕರಾಗಿರುವವರು ತಮ್ಮ ಹಕ್ಕು ಚಲಾಯಿಸಿ ನಂತರ ತಮ್ಮ ಇಲಾಖೆಯಲ್ಲಿನ ಜನಸೇವೆಯ ಕರ್ತವ್ಯ ಮುಂದುವರೆಸಲಿ ಅದು ಬಿಟ್ಟು ಮೂರು ದಿನಗಳ ಮೊದಲೇ ರೆಸಾರ್ಟ್,ಪ್ರವಾಸಕ್ಕೆ ಕರೆದುಕೊಂಡು ಹೋಗಿ ಮೋಜು,ಮಸ್ತಿ ಮಾಡುವ ಮೂಲಕ ರಾಜಕೀಯ ಪಕ್ಷಗಳಿಗಿಂತ ನಾವು ಏನೂ ಕಡಿಮೆ ಇಲ್ಲ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಮನವಿ ನೀಡುವಾಗ ಸಂಘಟನೆತ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ತಾ.ಅ ಮೂರಾಂಡಹಳ್ಳಿ ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನ ಸೌಭಾಗ್ಯ ಮುಂತಾದವರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago