Categories: ಕೋಲಾರ

ಸರ್ಕಾರಿ ನೌಕರರ ಸಂಘದ ಹೆಸರಲ್ಲಿ ಭ್ರಷ್ಟಾಚಾರ ಆರೋಪ: ಕ್ರಮಕ್ಕೆ ರೈತ ಸಂಘದಿಂದ ಡಿಸಿಗೆ ಮನವಿ

ಕೋಲಾರ: ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾರ್ಟ್, ಪ್ರವಾಸ, ಮೋಜು, ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಬೇಕಾದ ನೌಕರರೇ ಹಾದಿ ತಪ್ಪಿದರೆ ಇನ್ನೂ ಜನಸಾಮಾನ್ಯರಿಗೆ ನ್ಯಾಯ ಒದಗಿಸುವವರೇ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದಕ್ಕೆ ನೌಕರರ ಸಂಘದ ಚುನಾವಣೆಯಲ್ಲಿ ಹರಿದಾಡುತ್ತಿರುವ ಹಣ,ಆಮಿಷಗಳೇ ಸಾಕ್ಷಿಯಾಗಿದೆ, ಸರ್ಕಾರಿ ನೌಕರರು ಕೇವಲ ಸಂಬಳ ಪಡೆಯುವುದು ಮಾತ್ರವಾದರೆ ಇಷ್ಟೊಂದು ಲಕ್ಷಲಕ್ಷ ಹಣ ಎಲ್ಲಿಂದ ತಂದು ಚುನಾವಣೆಯಲ್ಲಿ ಹಂಚಲು ಸಿದ್ದರಾಗಿದ್ದಾರೆ ಎಂಬುದರ ಕುರಿತು ಜಿಲ್ಲಾಧಿಕಾರಿಗಳು ತನಿಖೆಗೆ ಆಗ್ರಹಿಸಬೇಕು, ಲೋಕಾಯುಕ್ತರು ಇಂತಹ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು,ಆಮಿಷವೊಡ್ಡುವ ನೌಕರರ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ, ನೌಕರರ ಸಂಘ ಚುನವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನೌಕರರ ಅಭಿವೃದ್ದಿ, ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಬೇಕೇ ಹೊರತು ರಾಜಕೀಯ ವ್ಯಕ್ತಿಗಳ ಜೊತೆ ಸೇರಿಕೊಂಡು ಆ ಪಕ್ಷ ಈ ಪಕ್ಷ ಎಂದು ಚುನಾವಣೆಯನ್ನು ದಿಕ್ಕು ತಪ್ಪಿಸಿ ಮತ ಚಲಾಯಿಸುವ ನೌಕರರಿಗೆ ದ್ವಿಚಕ್ರವಾಹನ, ಚಿನ್ನದ ನಾಣ್ಯ ಮತ್ತಿತರ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿವೆ, ಇದು ನಿಜವೇ ಆಗಿದ್ದಲ್ಲಿ ಅದನ್ನು ಪತ್ತೆಹಚ್ಚಿ ಇದನ್ನು ನೀಡುವ ಭ್ರಷ್ಟ ಕುಳಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಡಿ.4 ರಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ನಿಗಧಿಯಾಗಿರುವುದು ಸರಿಯಷ್ಟೆ. ಆದರೆ ಚುನಾವಣೆಗೆ ಮುನ್ನಾ ಅಭ್ಯರ್ಥಿಗಳು ನೌಕರರ ಸಂಘದ ನಿರ್ದೇಶಕರಿಗೆ ಹಣ,ಆಮಿಷವೊಡ್ಡಿ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿರುವ ಜೊತೆಗೆ ಕೋಟಿ ಕೋಟಿ ಹಣ ಸುರಿಯುತ್ತಿರುವ ನೌಕರ ಸಂಘದ ಆಭ್ಯರ್ಥಿಗಳಿಗೆ ಹಣದ ಮೂಲ ಯಾವುದು ಜನ ಸಾಮಾನ್ಯರನ್ನು ಹಿಂಸಿಸಿ ಹಣ ಮಾಡಿ ಚುನಾವಣೆಗೆ ಸುರಿಯುತ್ತಿದ್ದಾರೆಯೇ ಇಲ್ಲವೇ ರಾಜಕಾರಣಿಗಳು ಅಧಿಕಾರಿಗಳನ್ನು ತಮ್ಮ ಹಿಡಿತಕ್ಕೆ ಪಡೆದು ಗೆದ್ದ ನಂತರ ಸರ್ಕಾರಿ ಆಸ್ತಿಗಳನ್ನು ಕಬಳಿಸಲು ಬಂಡವಾಳ ಸುರಿಯುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದರು.

ಚುನಾವಣೆ ಡಿ.4 ರಂದು ನಡೆಯಲಿದ್ದು, ಅಂದುಹೋಗಿ ನೌಕರರ ಸಂಘದ ನಿರ್ದೇಶಕರಾಗಿರುವವರು ತಮ್ಮ ಹಕ್ಕು ಚಲಾಯಿಸಿ ನಂತರ ತಮ್ಮ ಇಲಾಖೆಯಲ್ಲಿನ ಜನಸೇವೆಯ ಕರ್ತವ್ಯ ಮುಂದುವರೆಸಲಿ ಅದು ಬಿಟ್ಟು ಮೂರು ದಿನಗಳ ಮೊದಲೇ ರೆಸಾರ್ಟ್,ಪ್ರವಾಸಕ್ಕೆ ಕರೆದುಕೊಂಡು ಹೋಗಿ ಮೋಜು,ಮಸ್ತಿ ಮಾಡುವ ಮೂಲಕ ರಾಜಕೀಯ ಪಕ್ಷಗಳಿಗಿಂತ ನಾವು ಏನೂ ಕಡಿಮೆ ಇಲ್ಲ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಮನವಿ ನೀಡುವಾಗ ಸಂಘಟನೆತ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ತಾ.ಅ ಮೂರಾಂಡಹಳ್ಳಿ ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನ ಸೌಭಾಗ್ಯ ಮುಂತಾದವರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

3 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

7 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

9 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

11 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago